ಬ್ರೇಕಿಂಗ್ ನ್ಯೂಸ್
23-05-24 02:07 pm HK NEWS ಕರ್ನಾಟಕ
ಬೆಂಗಳೂರು, ಮೇ 23: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಹೋಟೆಲ್ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್ಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿವೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ.
ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರು.

ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಆರಂಂಭಿಸಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.
ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಬಳಿಕ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದರು.
ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳಿಗೆ ಅಗತ್ಯವಾದ ರಕ್ಷಣೆ, ಘಟನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಜೊತೆಗೆ ಈ ಹೋಟೆಲ್ಗಳಲ್ಲಿ ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಭಯ ನೀಡಿದರು.ನಂತರ ಹೋಟೆಲ್ನಲ್ಲಿ ತಂಗಿದ್ದವರು, ಹೋಟೆಲ್ ಸಿಬ್ಬಂದಿ ಮತ್ತು ಮಾಲೀಕರು ನಿಟ್ಟುಸಿರು ಬಿಟ್ಟರು.
ಈ ಸಂಬಂಧ ಆಗ್ನೇಯ ವಿಭಾಗದ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಹಿಂದೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ.
The Bengaluru police on Thursday said three well-known hotels in Bengaluru received emails threatening a bomb blast. These hotels include The Oterra, said DCP South East Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm