ಬ್ರೇಕಿಂಗ್ ನ್ಯೂಸ್
23-05-24 05:29 pm HK NEWS ಕರ್ನಾಟಕ
ಬೆಂಗಳೂರು, ಮೇ 23: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ. ಆದರೆ ಇದೀಗ ಅಖಾಡಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಇಳಿದಿದ್ದು ಎಲ್ಲೇ ಇದ್ದರೂ ಕೂಡಲೇ ಭಾರತಕ್ಕೆ ಮರಳುವಂತೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಜೆಡಿಎಸ್ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನರು ನನ್ನ ಮತ್ತು ನನ್ನ ಕುಟುಂಬದರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಅದರೂ ನಾನು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ.
ಇರಲಿ ಸದ್ಯಕ್ಕೆ ನಾನು ಏನು ಮಾಡಬಹುದು ಎಂದರೆ ಪ್ರಜ್ವಲ್ ಎಲ್ಲಿದ್ದರೂ ಬಂದು, ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸು ಎಂದು ಮುಲಾಜಿಲ್ಲದೆ ಹೇಳಬಲ್ಲೆ. ಇದು ಅವನಿಗೆ ಕೊಡುತ್ತಿರುವ ಕೊನೆಯ ಎಚ್ಚರಿಕೆ. ನೀನು ಮಾಡಿದ್ದೀಯ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ನೀನು ತಲೆಬಾಗದಿದ್ದಲ್ಲಿ ನೀನು ನನ್ನ ಕುಟುಂಬದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ನನ್ನ ಬಗ್ಗೆ ಗೌರವವಿದ್ದರೆ ಕೂಡಲೇ ಬಂದು ಪೊಲೀಸರಿಗೆ ಶರಣಾಗು ಎಂದು ಎಚ್ಚರಿಸಿದ್ದಾರೆ.
Former Prime Minister and Janata Dal (Secular) chief HD Deve Gowda issued a stern warning to his grandson and the accused in the sexual harassment case, Prajwal Revanna, to return to the country and surrender before the police. He said Revanna should be given the harshest punishment if the accusations against him turn out to be true.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm