ಬ್ರೇಕಿಂಗ್ ನ್ಯೂಸ್
23-05-24 05:29 pm HK NEWS ಕರ್ನಾಟಕ
ಬೆಂಗಳೂರು, ಮೇ 23: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ. ಆದರೆ ಇದೀಗ ಅಖಾಡಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಇಳಿದಿದ್ದು ಎಲ್ಲೇ ಇದ್ದರೂ ಕೂಡಲೇ ಭಾರತಕ್ಕೆ ಮರಳುವಂತೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಜೆಡಿಎಸ್ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನರು ನನ್ನ ಮತ್ತು ನನ್ನ ಕುಟುಂಬದರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಅದರೂ ನಾನು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ.
ಇರಲಿ ಸದ್ಯಕ್ಕೆ ನಾನು ಏನು ಮಾಡಬಹುದು ಎಂದರೆ ಪ್ರಜ್ವಲ್ ಎಲ್ಲಿದ್ದರೂ ಬಂದು, ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸು ಎಂದು ಮುಲಾಜಿಲ್ಲದೆ ಹೇಳಬಲ್ಲೆ. ಇದು ಅವನಿಗೆ ಕೊಡುತ್ತಿರುವ ಕೊನೆಯ ಎಚ್ಚರಿಕೆ. ನೀನು ಮಾಡಿದ್ದೀಯ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ನೀನು ತಲೆಬಾಗದಿದ್ದಲ್ಲಿ ನೀನು ನನ್ನ ಕುಟುಂಬದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ನನ್ನ ಬಗ್ಗೆ ಗೌರವವಿದ್ದರೆ ಕೂಡಲೇ ಬಂದು ಪೊಲೀಸರಿಗೆ ಶರಣಾಗು ಎಂದು ಎಚ್ಚರಿಸಿದ್ದಾರೆ.
Former Prime Minister and Janata Dal (Secular) chief HD Deve Gowda issued a stern warning to his grandson and the accused in the sexual harassment case, Prajwal Revanna, to return to the country and surrender before the police. He said Revanna should be given the harshest punishment if the accusations against him turn out to be true.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm