ಬ್ರೇಕಿಂಗ್ ನ್ಯೂಸ್
24-05-24 09:14 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.24: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿಯ ಬಾಯಿಬಿಡಿಸಿದ್ದು ಕೊಲೆ ಹಿನ್ನೆಲೆ ಬಗ್ಗೆ ತಿಳಿದುಕೊಂಡಿದ್ದಾರೆ.
ಆರೋಪಿ ಗಿರೀಶ್ ಕೇವಲ ಒಂದು ಸಾವಿರ ರೂಪಾಯಿಗಾಗಿ ಕೊಲೆ ಮಾಡಿದ್ದಾಗಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಂಜಲಿ ಮತ್ತು ಗಿರೀಶ್ ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಗಿರೀಶ್ ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಪರಸ್ಪರ ಸಂಪರ್ಕದಲ್ಲಿದ್ದರು. ಮೇ 17ರಂದು ರಾತ್ರಿ ಅಂಜಲಿ, ಫೋನ್ ಮಾಡಿ ಒಂದು ಸಾವಿರ ರೂಪಾಯಿ ಪೊನ್ ಪೇ ಮಾಡಿಸಿಕೊಂಡಿದ್ದಳು. ಹಣವನ್ನು ಪೊನ್ ಪೇ ಮಾಡಿಸಿಕೊಂಡು ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು ಎಂಬ ಮಾಹಿತಿ ತನಿಖೆಯಲ್ಲಿ ಸಿಕ್ಕಿದೆ. ಇದರಿಂದ ಸಿಟ್ಟಿಗೆದ್ದ ಗಿರೀಶ್ ಮೈಸೂರಿನಿಂದ ಹುಬ್ಬಳ್ಳಿಗೆ ಬಂದಿದ್ದು ಪ್ರೀತಿಸುತ್ತಿದ್ದಾಕೆಯ ಮೇಲಿನ ದ್ವೇಷದಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ರಾತ್ರೋರಾತ್ರಿ ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿಯನ್ನು ಕೊಲೆ ಮಾಡಿದ್ದ.
ಸಿಐಡಿ ಅಧಿಕಾರಿಗಳ ಮುಂದೆ ಈ ವಿಚಾರವನ್ನು ಗಿರೀಶ್ ಹೇಳಿಕೊಂಡಿದ್ದು ಕೇವಲ ಒಂದು ಸಾವಿರ ರೂಪಾಯಿಗಾಗಿ ಅಂಜಲಿ ಜೀವ ತೆಗೆದ್ನಾ ಎನ್ನುವ ಸಂಶಯ ಮೂಡಿದೆ. ಯಾವ ಕಾರಣಕ್ಕೆ ಹಣ ಹಾಕಿಸಿಕೊಂಡಿದ್ದಳು, ಅವರ ನಡುವಿನ ವ್ಯವಹಾರ ಏನಿತ್ತು, ಮನಸ್ತಾಪ ಕಾರಣಕ್ಕೆ ಫೋನ್ ಬ್ಲಾಕ್ ಮಾಡಿದ್ದಳೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಂಜಲಿ ಕೊಲೆಯಾಗಿ ಹತ್ತು ದಿನ ಕಳೆದರೂ ಪೊಲೀಸರಿಗೆ ಇನ್ನೂ ಕೊಲೆಗೆ ಬಳಸಿದ್ದ ಚಾಕು ಪತ್ತೆಯಾಗಿಲ್ಲ. ಹತ್ಯೆಯಾದ ಸ್ಥಳದ ಬಳಿ ಸುತ್ತಮುತ್ತ ಇಂಚಿಂಚು ಹುಡುಕಾಡಿದರೂ ಚಾಕು ಸಿಗದೇ ಇರುವುದರಿಂದ ಪೊಲೀಸರಿಗೆ ತಲೆನೋವಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಸಿಐಡಿ ಅಧಿಕಾರಿಗಳು ಕೊಲೆ ನಡೆದ ಸ್ಥಳದಿಂದ ಚರಂಡಿ ಸೇರಿ ರಸ್ತೆ ಆಸುಪಾಸಿನಲ್ಲಿ ಹುಡುಕಾಟ ಮಾಡಿದರೂ ಚಾಕು ಪತ್ತೆಯಾಗಿಲ್ಲ. ಚಾಕುವನ್ನು ಎಲ್ಲಿ ಎಸೆದಿದ್ದೇನೆ ಎಂಬ ಬಗ್ಗೆ ಆರೋಪಿ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ.
Hubballi Anjali murder case, Accused killed her over thousand rupees, shocking details revealed
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm