ಬ್ರೇಕಿಂಗ್ ನ್ಯೂಸ್
24-05-24 09:14 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.24: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿಯ ಬಾಯಿಬಿಡಿಸಿದ್ದು ಕೊಲೆ ಹಿನ್ನೆಲೆ ಬಗ್ಗೆ ತಿಳಿದುಕೊಂಡಿದ್ದಾರೆ.
ಆರೋಪಿ ಗಿರೀಶ್ ಕೇವಲ ಒಂದು ಸಾವಿರ ರೂಪಾಯಿಗಾಗಿ ಕೊಲೆ ಮಾಡಿದ್ದಾಗಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಂಜಲಿ ಮತ್ತು ಗಿರೀಶ್ ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಗಿರೀಶ್ ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಪರಸ್ಪರ ಸಂಪರ್ಕದಲ್ಲಿದ್ದರು. ಮೇ 17ರಂದು ರಾತ್ರಿ ಅಂಜಲಿ, ಫೋನ್ ಮಾಡಿ ಒಂದು ಸಾವಿರ ರೂಪಾಯಿ ಪೊನ್ ಪೇ ಮಾಡಿಸಿಕೊಂಡಿದ್ದಳು. ಹಣವನ್ನು ಪೊನ್ ಪೇ ಮಾಡಿಸಿಕೊಂಡು ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು ಎಂಬ ಮಾಹಿತಿ ತನಿಖೆಯಲ್ಲಿ ಸಿಕ್ಕಿದೆ. ಇದರಿಂದ ಸಿಟ್ಟಿಗೆದ್ದ ಗಿರೀಶ್ ಮೈಸೂರಿನಿಂದ ಹುಬ್ಬಳ್ಳಿಗೆ ಬಂದಿದ್ದು ಪ್ರೀತಿಸುತ್ತಿದ್ದಾಕೆಯ ಮೇಲಿನ ದ್ವೇಷದಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ರಾತ್ರೋರಾತ್ರಿ ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿಯನ್ನು ಕೊಲೆ ಮಾಡಿದ್ದ.
ಸಿಐಡಿ ಅಧಿಕಾರಿಗಳ ಮುಂದೆ ಈ ವಿಚಾರವನ್ನು ಗಿರೀಶ್ ಹೇಳಿಕೊಂಡಿದ್ದು ಕೇವಲ ಒಂದು ಸಾವಿರ ರೂಪಾಯಿಗಾಗಿ ಅಂಜಲಿ ಜೀವ ತೆಗೆದ್ನಾ ಎನ್ನುವ ಸಂಶಯ ಮೂಡಿದೆ. ಯಾವ ಕಾರಣಕ್ಕೆ ಹಣ ಹಾಕಿಸಿಕೊಂಡಿದ್ದಳು, ಅವರ ನಡುವಿನ ವ್ಯವಹಾರ ಏನಿತ್ತು, ಮನಸ್ತಾಪ ಕಾರಣಕ್ಕೆ ಫೋನ್ ಬ್ಲಾಕ್ ಮಾಡಿದ್ದಳೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಂಜಲಿ ಕೊಲೆಯಾಗಿ ಹತ್ತು ದಿನ ಕಳೆದರೂ ಪೊಲೀಸರಿಗೆ ಇನ್ನೂ ಕೊಲೆಗೆ ಬಳಸಿದ್ದ ಚಾಕು ಪತ್ತೆಯಾಗಿಲ್ಲ. ಹತ್ಯೆಯಾದ ಸ್ಥಳದ ಬಳಿ ಸುತ್ತಮುತ್ತ ಇಂಚಿಂಚು ಹುಡುಕಾಡಿದರೂ ಚಾಕು ಸಿಗದೇ ಇರುವುದರಿಂದ ಪೊಲೀಸರಿಗೆ ತಲೆನೋವಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಸಿಐಡಿ ಅಧಿಕಾರಿಗಳು ಕೊಲೆ ನಡೆದ ಸ್ಥಳದಿಂದ ಚರಂಡಿ ಸೇರಿ ರಸ್ತೆ ಆಸುಪಾಸಿನಲ್ಲಿ ಹುಡುಕಾಟ ಮಾಡಿದರೂ ಚಾಕು ಪತ್ತೆಯಾಗಿಲ್ಲ. ಚಾಕುವನ್ನು ಎಲ್ಲಿ ಎಸೆದಿದ್ದೇನೆ ಎಂಬ ಬಗ್ಗೆ ಆರೋಪಿ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ.
Hubballi Anjali murder case, Accused killed her over thousand rupees, shocking details revealed
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm