ಬ್ರೇಕಿಂಗ್ ನ್ಯೂಸ್
24-05-24 09:14 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.24: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿಯ ಬಾಯಿಬಿಡಿಸಿದ್ದು ಕೊಲೆ ಹಿನ್ನೆಲೆ ಬಗ್ಗೆ ತಿಳಿದುಕೊಂಡಿದ್ದಾರೆ.
ಆರೋಪಿ ಗಿರೀಶ್ ಕೇವಲ ಒಂದು ಸಾವಿರ ರೂಪಾಯಿಗಾಗಿ ಕೊಲೆ ಮಾಡಿದ್ದಾಗಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಂಜಲಿ ಮತ್ತು ಗಿರೀಶ್ ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಗಿರೀಶ್ ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಪರಸ್ಪರ ಸಂಪರ್ಕದಲ್ಲಿದ್ದರು. ಮೇ 17ರಂದು ರಾತ್ರಿ ಅಂಜಲಿ, ಫೋನ್ ಮಾಡಿ ಒಂದು ಸಾವಿರ ರೂಪಾಯಿ ಪೊನ್ ಪೇ ಮಾಡಿಸಿಕೊಂಡಿದ್ದಳು. ಹಣವನ್ನು ಪೊನ್ ಪೇ ಮಾಡಿಸಿಕೊಂಡು ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು ಎಂಬ ಮಾಹಿತಿ ತನಿಖೆಯಲ್ಲಿ ಸಿಕ್ಕಿದೆ. ಇದರಿಂದ ಸಿಟ್ಟಿಗೆದ್ದ ಗಿರೀಶ್ ಮೈಸೂರಿನಿಂದ ಹುಬ್ಬಳ್ಳಿಗೆ ಬಂದಿದ್ದು ಪ್ರೀತಿಸುತ್ತಿದ್ದಾಕೆಯ ಮೇಲಿನ ದ್ವೇಷದಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ರಾತ್ರೋರಾತ್ರಿ ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿಯನ್ನು ಕೊಲೆ ಮಾಡಿದ್ದ.
ಸಿಐಡಿ ಅಧಿಕಾರಿಗಳ ಮುಂದೆ ಈ ವಿಚಾರವನ್ನು ಗಿರೀಶ್ ಹೇಳಿಕೊಂಡಿದ್ದು ಕೇವಲ ಒಂದು ಸಾವಿರ ರೂಪಾಯಿಗಾಗಿ ಅಂಜಲಿ ಜೀವ ತೆಗೆದ್ನಾ ಎನ್ನುವ ಸಂಶಯ ಮೂಡಿದೆ. ಯಾವ ಕಾರಣಕ್ಕೆ ಹಣ ಹಾಕಿಸಿಕೊಂಡಿದ್ದಳು, ಅವರ ನಡುವಿನ ವ್ಯವಹಾರ ಏನಿತ್ತು, ಮನಸ್ತಾಪ ಕಾರಣಕ್ಕೆ ಫೋನ್ ಬ್ಲಾಕ್ ಮಾಡಿದ್ದಳೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಂಜಲಿ ಕೊಲೆಯಾಗಿ ಹತ್ತು ದಿನ ಕಳೆದರೂ ಪೊಲೀಸರಿಗೆ ಇನ್ನೂ ಕೊಲೆಗೆ ಬಳಸಿದ್ದ ಚಾಕು ಪತ್ತೆಯಾಗಿಲ್ಲ. ಹತ್ಯೆಯಾದ ಸ್ಥಳದ ಬಳಿ ಸುತ್ತಮುತ್ತ ಇಂಚಿಂಚು ಹುಡುಕಾಡಿದರೂ ಚಾಕು ಸಿಗದೇ ಇರುವುದರಿಂದ ಪೊಲೀಸರಿಗೆ ತಲೆನೋವಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಸಿಐಡಿ ಅಧಿಕಾರಿಗಳು ಕೊಲೆ ನಡೆದ ಸ್ಥಳದಿಂದ ಚರಂಡಿ ಸೇರಿ ರಸ್ತೆ ಆಸುಪಾಸಿನಲ್ಲಿ ಹುಡುಕಾಟ ಮಾಡಿದರೂ ಚಾಕು ಪತ್ತೆಯಾಗಿಲ್ಲ. ಚಾಕುವನ್ನು ಎಲ್ಲಿ ಎಸೆದಿದ್ದೇನೆ ಎಂಬ ಬಗ್ಗೆ ಆರೋಪಿ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ.
Hubballi Anjali murder case, Accused killed her over thousand rupees, shocking details revealed
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm