ಬ್ರೇಕಿಂಗ್ ನ್ಯೂಸ್
30-05-24 10:27 am Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ ತಿಂಗಳಿಗೆ 8500 ರೂ. ಸಿಗುತ್ತದೆ ಎಂಬ ವದಂತಿ ನಂಬಿದ ಸಾವಿರಾರು ಮಹಿಳೆಯರು ಖಾತೆ ಮಾಡಿಸಲು ಬೆಂಗಳೂರಿನಲ್ಲಿ ಅಂಚೆ ಕಚೇರಿಗೆ ದಾಂಗುಡಿ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಬುರ್ಖಾ ಹಾಕಿದ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದು ಅಂಚೆ ಕಚೇರಿ ಸಿಬಂದಿಗೆ ಸಮಸ್ಯೆ ಉಂಟು ಮಾಡಿದ್ದಾರೆ.
ಲೋಕಸಭೆ ಫಲಿತಾಂಶ ದಿನ ಹತ್ತಿರವಾಗುತ್ತಿದ್ದಂತೆ ಜನರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ. ಪೋಸ್ಟ್ ಆಫೀಸ್ ಎದುರಿನಲ್ಲಿ ದಿನದಿಂದ ದಿನಕ್ಕೆ ಜನಜಂಗುಳಿ ಹೆಚ್ಚಾಗುತ್ತಿದ್ದು, ಕಚೇರಿ ಎದುರು ಜಮಾಯಿಸಿದ ಜನರನ್ನು ನಿಭಾಯಿಸುವುದು ಸಿಬ್ಬಂದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಖಾತೆ ಮಾಡಿಸುವ ಸಲುವಾಗಿ ಹೆಂಗಳೆಯರು ಬೆಳಗ್ಗೆ 6 ಗಂಟೆಯಿಂದಲೇ ಅಂಚೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಜನಸಂದಣಿಯನ್ನು ನಿಭಾಯಿಸಲು ಮಹಿಳಾ ಪೊಲೀಸರು ಮತ್ತು ಅಂಚೆ ಕಚೇರಿಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಯಿ ಮಾತು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ಗಳನ್ನು ನಂಬಿ ಖಾತೆ ಮಾಡಿಸಲು ಬಂದಿರುವುದಾಗಿ ಮಹಿಳೆಯರು ಹೇಳಿದ್ದಾರೆ. ಸರ್ಕಾರ ಬಂದ ಕೂಡಲೇ ಹಣ ಬರುತ್ತದೆ ಎಂದು ಕ್ಯುನಲ್ಲಿ ನಿಂತವರು ಹೇಳುತ್ತಿದ್ದರು.
ಕೊನೆಗೆ, ಅಂಚೆ ಕಚೇರಿಯ ಹೊರಗಡೆ ಯಾವುದೇ ಹಣ ಪಾವತಿ ಮಾಡುವುದಿಲ್ಲ ಎಂದು ಬೋರ್ಡ್ ಹಾಕಿದರೂ, ಜನರು ಕೇಳಲಿಲ್ಲ. ನಾವು ಖಾತೆ ತೆರೆಯುತ್ತೇವೆ ಎಂದು ಪಟ್ಟು ಹಿಡಿದವರೂ ಇದ್ದರು. ದಿನದಲ್ಲಿ 500-600 ಮಂದಿ ಕ್ಯೂ ನಿಂತು ಖಾತೆ ತೆರೆಯುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಬರುತ್ತದೆ ಎಂದು ಹೇಳಿದ್ದನ್ನು ನಂಬಿ ಬಂದಿದ್ದಾಗಿ ಕೆಲವರು ಹೇಳಿದ್ದಾರೆ. ಶಿವಾಜಿನಗರ, ಚಾಮರಾಜಪೇಟೆ ಆಸುಪಾಸಿನಲ್ಲಿ ಅತಿ ಹೆಚ್ಚು ಮಹಿಳೆಯರು ಅಂಚೆ ಕಚೇರಿ ಮುಂದೆ ಇಡೀ ದಿನ ಕ್ಯೂ ನಿಂತಿದ್ದಾರೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಇದ್ದಂತೆ ಕೇಂದ್ರದಲ್ಲಿ ಅದೇ ಮಾದರಿಯ ಯೋಜನೆ ತರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತ ಬಂದಿದ್ದಾರೆ. ಹೀಗಾಗಿ ಫಲಿತಾಂಶಕ್ಕೆ ನಾಲ್ಕು ದಿನ ಇರುವಾಗಲೇ ಮಹಿಳೆಯರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ.
An otherwise silent General Post Office in the city is witnessing an unprecedented rush of women hurrying to open India Post Payment Bank accounts, anticipating a monthly deposit of Rs 8,500 into their accounts if the I.N.D.I.A. bloc comes to power at the Centre.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm