ಬ್ರೇಕಿಂಗ್ ನ್ಯೂಸ್
30-05-24 10:27 am Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ ತಿಂಗಳಿಗೆ 8500 ರೂ. ಸಿಗುತ್ತದೆ ಎಂಬ ವದಂತಿ ನಂಬಿದ ಸಾವಿರಾರು ಮಹಿಳೆಯರು ಖಾತೆ ಮಾಡಿಸಲು ಬೆಂಗಳೂರಿನಲ್ಲಿ ಅಂಚೆ ಕಚೇರಿಗೆ ದಾಂಗುಡಿ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಬುರ್ಖಾ ಹಾಕಿದ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದು ಅಂಚೆ ಕಚೇರಿ ಸಿಬಂದಿಗೆ ಸಮಸ್ಯೆ ಉಂಟು ಮಾಡಿದ್ದಾರೆ.
ಲೋಕಸಭೆ ಫಲಿತಾಂಶ ದಿನ ಹತ್ತಿರವಾಗುತ್ತಿದ್ದಂತೆ ಜನರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ. ಪೋಸ್ಟ್ ಆಫೀಸ್ ಎದುರಿನಲ್ಲಿ ದಿನದಿಂದ ದಿನಕ್ಕೆ ಜನಜಂಗುಳಿ ಹೆಚ್ಚಾಗುತ್ತಿದ್ದು, ಕಚೇರಿ ಎದುರು ಜಮಾಯಿಸಿದ ಜನರನ್ನು ನಿಭಾಯಿಸುವುದು ಸಿಬ್ಬಂದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಖಾತೆ ಮಾಡಿಸುವ ಸಲುವಾಗಿ ಹೆಂಗಳೆಯರು ಬೆಳಗ್ಗೆ 6 ಗಂಟೆಯಿಂದಲೇ ಅಂಚೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಜನಸಂದಣಿಯನ್ನು ನಿಭಾಯಿಸಲು ಮಹಿಳಾ ಪೊಲೀಸರು ಮತ್ತು ಅಂಚೆ ಕಚೇರಿಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಯಿ ಮಾತು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ಗಳನ್ನು ನಂಬಿ ಖಾತೆ ಮಾಡಿಸಲು ಬಂದಿರುವುದಾಗಿ ಮಹಿಳೆಯರು ಹೇಳಿದ್ದಾರೆ. ಸರ್ಕಾರ ಬಂದ ಕೂಡಲೇ ಹಣ ಬರುತ್ತದೆ ಎಂದು ಕ್ಯುನಲ್ಲಿ ನಿಂತವರು ಹೇಳುತ್ತಿದ್ದರು.
ಕೊನೆಗೆ, ಅಂಚೆ ಕಚೇರಿಯ ಹೊರಗಡೆ ಯಾವುದೇ ಹಣ ಪಾವತಿ ಮಾಡುವುದಿಲ್ಲ ಎಂದು ಬೋರ್ಡ್ ಹಾಕಿದರೂ, ಜನರು ಕೇಳಲಿಲ್ಲ. ನಾವು ಖಾತೆ ತೆರೆಯುತ್ತೇವೆ ಎಂದು ಪಟ್ಟು ಹಿಡಿದವರೂ ಇದ್ದರು. ದಿನದಲ್ಲಿ 500-600 ಮಂದಿ ಕ್ಯೂ ನಿಂತು ಖಾತೆ ತೆರೆಯುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಬರುತ್ತದೆ ಎಂದು ಹೇಳಿದ್ದನ್ನು ನಂಬಿ ಬಂದಿದ್ದಾಗಿ ಕೆಲವರು ಹೇಳಿದ್ದಾರೆ. ಶಿವಾಜಿನಗರ, ಚಾಮರಾಜಪೇಟೆ ಆಸುಪಾಸಿನಲ್ಲಿ ಅತಿ ಹೆಚ್ಚು ಮಹಿಳೆಯರು ಅಂಚೆ ಕಚೇರಿ ಮುಂದೆ ಇಡೀ ದಿನ ಕ್ಯೂ ನಿಂತಿದ್ದಾರೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಇದ್ದಂತೆ ಕೇಂದ್ರದಲ್ಲಿ ಅದೇ ಮಾದರಿಯ ಯೋಜನೆ ತರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತ ಬಂದಿದ್ದಾರೆ. ಹೀಗಾಗಿ ಫಲಿತಾಂಶಕ್ಕೆ ನಾಲ್ಕು ದಿನ ಇರುವಾಗಲೇ ಮಹಿಳೆಯರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ.
An otherwise silent General Post Office in the city is witnessing an unprecedented rush of women hurrying to open India Post Payment Bank accounts, anticipating a monthly deposit of Rs 8,500 into their accounts if the I.N.D.I.A. bloc comes to power at the Centre.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm