ಬ್ರೇಕಿಂಗ್ ನ್ಯೂಸ್
31-05-24 06:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 31: ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ. ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ ಈ ಮಹತ್ವದ ಆದೇಶ ಮಾಡಿದೆ. ಪ್ರಜ್ವಲ್ ಪರ ವಾದ ಮಾಡಿದ ವಕೀಲರು 1 ದಿನ ಮಾತ್ರ ಎಸ್ಐಟಿ ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಾಧೀಶರು ಜೂನ್ 6 ರವರೆಗೆ ಕಸ್ಟಡಿಗೆ ನೀಡಿದೆ.
ಎಸ್ಐಟಿ ಪರವಾಗಿ ವಾದ ಮಂಡನೆ ಮಾಡಿದ ಎಸ್ಎಸ್ಪಿ ಅಶೋಕ್ ನಾಯಕ್, ಇವನು ಒಬ್ಬ ವಿಕೃತ ಕಾಮಿ ಎನ್ನಿಸುತ್ತಿದೆ. ಇವ ತುಂಬಾ ಅಪಾಯಕಾರಿ ಇದ್ದಾನೆ. ಸಂತ್ರಸ್ತ ಮಹಿಳೆ ಹೇಳಿಕೆ ಪ್ರಕಾರ ಅತ್ಯಾಚಾರ ಮಾಡಿದ್ದಾನೆ. ಈ ಪ್ರಕರಣದಲ್ಲಿ 100 ಕ್ಕೂ ಹೆಚ್ಚು ಸಂತ್ರಸ್ತಯರು ಇದ್ದಾರೆ. ಈ ಬಗ್ಗೆ ಮೀಡಿಯಾದಲ್ಲಿ ಸುದ್ದಿ ಅಗಬಾರದು ಅಂತ ತಡಯಾಜ್ಞೆ ತಂದಿದ್ದಾರೆ ಎಂದು ವಾದಿಸಿದರು.
ಅಲ್ಲದೆ, ವಾಟ್ ಆ್ಯಪ್ ಕಾಲ್ ಮಾಡಿ ಬಟ್ಟೆ ಬಿಚ್ಚಲು ಹೇಳಿದ್ದಾನೆ. ಹೀಗಾಗಿ ಪ್ರಜ್ವಲ್ ನ್ನ ತನಿಖೆ ಮಾಡಬೇಕಿದೆ. ವಿಡಿಯೋ ಮಾಡಿರೋ ಮೊಬೈಲ್ ಪತ್ತೆ ಮಾಡಬೇಕಿದೆ. ಜೊತೆಗೆ ಹಲವು ಸಾಕ್ಷಿಗಳನ್ನು ಪತ್ತೆ ಮಾಡಬೇಕಿದೆ. ಈತ ದೇಶ ಬಿಟ್ಟು ಹೋಗಿದ್ದ. ವಾಪಸು ಬರುವ ಉದ್ದೇಶ ಇರಲಿಲ್ಲ. ಇದನ್ನು ಎಲ್ಲಾ ತನಿಖೆ ಮಾಡಬೇಕಿದೆ ಎಂದು ಸರ್ಕಾರಿ ಪರ ವಕೀಲರು ವಾದ ಮಂಡನೆ ಮಾಡಿದರು.
ಯಾಕೆ ವಿದೇಶಕ್ಕೆ ಹೋಗಿದ್ದ ಅಂತ ಇಲ್ಲಿಯವರೆಗೆ ಪ್ರಜ್ವಲ್ ಹೇಳಿಲ್ಲ. ಹೀಗಾಗಿ ಆರೋಪಿ ವಿಚಾರಣೆ ತುಂಬಾ ಅಗತ್ಯ ಇದೆ. ಸಂತ್ರಸ್ತರಿಗೆ ಹೆದರಿಸಿ ಕಿರುಕುಳ ನೀಡಿದ್ದಾನೆ. ಈ ಪ್ರಕರಣದ ವಿಚಾರವಾಗಿ ನಿನ್ನೆ ಹಾಸನದಲ್ಲಿ ಪ್ರತಿಭಟನೆ ಅಗಿದೆ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು. ಅಲ್ಲದೆ 14 ದಿನ ಕಸ್ಟಡಿಗೆ ನೀಡಿ ಅಂತ ಎಸ್ಐಟಿ ಪರ ವಕೀಲರು ವಾದ ಮಂಡಿಸಿದರು.
ಪ್ರಜ್ವಲ್ ಪರ ವಕೀಲ ಅರುಣ್ ವಾದ ಮಂಡಿಸಿ, ಆರೋಪಿ ಬಗ್ಗೆ ಸಾಕ್ಷಿ ಇಲ್ಲ. ವಿಡಿಯೋ ಮಾಡಿದ್ದಾನೆ ಎನ್ನಲಾದ ಡಿವೈಸ್ ಇಲ್ಲ. ಆರೋಪಿ ಎಸ್ಐಟಿ ಮುಂದೆ ಶರಣಾಗಿದ್ದಾನೆ. 14 ದಿನ ಕಸ್ಟಡಿಗೆ ಕೇಳುವುದು ನ್ಯಾಯ ಬದ್ದ ಅಲ್ಲ. ಕಸ್ಟಡಿಗೆ ಕೊಡಿ ಬೇಡಿ ಅನ್ನಲ್ಲ. ಕೊಟ್ಟರೆ ಒಂದು ದಿನ ಮಾತ್ರ ಕೊಡಿ ಅಂತ ಪ್ರಜ್ವಲ್ ಪರ ವಕೀಲರು ವಾದ ಮಂಡನೆ ಮಾಡಿದ್ದರು.
Hassan MP Prajwal Revanna was sent to a six-day police custody till June 6 on Friday, after being produced in a Bengaluru court. The Special Investigation Team probing the sexual assault allegations against him had sought a 15-day custody for him in the first FIR registered against him in Holenarasipura.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm