ಬ್ರೇಕಿಂಗ್ ನ್ಯೂಸ್
02-06-24 07:51 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.2: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ನಿರೀಕ್ಷೆಯಂತೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯಗೆ ಟಿಕೆಟ್ ನೀಡಲಾಗಿದೆ.
ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮುಳೆ ಅವರಿಗೆ ಟಿಕೆಟ್ ನೀಡಿತ್ತು.
ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿ ಮಾಡಿದ್ದು, ಎನ್.ಎಸ್. ಬೋಸರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಡಾ.ಕೆ ಗೋವಿಂದರಾಜು, ಐವಾನ್ ಡಿಸೋಜ, ಶ್ರೀಮತಿ ಬಿಲ್ಕಿಸ್ ಬಾನೋ ಹಾಗೂ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಲಾಗುತ್ತೆ ಎಂಬ ನಿರೀಕ್ಷೆಯಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಯತೀಂದ್ರ ಶಾಸಕರಾಗಿದ್ದರು. ಆದರೆ, ಕಳೆದ ಚುನಾವಣೆಯಲ್ಲಿ ಅದೇ ಕ್ಷೇತ್ರವನ್ನು ತಂದೆ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಡಲಾಗಿತ್ತು. ಇದೀಗ ವಿಧಾನ ಪರಿಷತ್ ಚುನಾವಣೆಗೆ ಪುತ್ರನಿಗೆ ಟಿಕೆಟ್ ಕೊಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ.
ಒಟ್ಟು 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಎಂಟು, ಬಿಜೆಪಿ ಮೂರು ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಜೆಡಿಎಸ್ ಕಡೆಯಿಂದ ಅಭ್ಯರ್ಥಿ ಹಾಕದೇ ಇದ್ದರೆ ಅವಿರೋಧ ಆಯ್ಕೆಯಾಗುವ ಸಾಧ್ಯತೆಯಿದೆ.
A day before the last date for filing nominations for the June 13 elections to the Karnataka Legislative Council, both the Congress and the BJP announced their lists of candidates on Sunday. The seven candidates announced by Congress are Science and Technology Minister N S Boseraju, state party working president Vasanth Kumar, Chief Minister Siddaramaiah’s son and former MLA Dr Yathindra, Siddaramaiah’s political secretary Dr K Govindaraj, former MLC Ivan D’Souza, former Karnataka State Minorities Commission chairperson Balkees Banu and the party’s Kalaburagi district president, Jagdev Guttedar.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm