ಬ್ರೇಕಿಂಗ್ ನ್ಯೂಸ್
03-06-24 10:34 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.03: ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನವಾಗಿದ್ದ ತೆಲುಗು ನಟಿ ಹೇಮಾ ಅವರಿಗೆ 12 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆನೇಕಲ್ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾಗೆ ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಮೇ 19ರಂದು ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್ ಹೌಸ್ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ರಾತ್ರಿ ಆನೇಕಲ್ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಅವರ ಮುಂದೆ ನಟಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ, ನಟಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ಬಂಧಿಸಲಾಗಿದೆ.
ನಾನೇನು ತಪ್ಪು ಮಾಡಿಲ್ಲ ;
ಕೋರ್ಟ್ಗೆ ಹಾಜರುಪಡಿಸುವಾಗ ನಟಿ ಹೇಮಾ ಮಾತನಾಡಿ, ನಾನೇನು ತಪ್ಪು ಮಾಡಿಲ್ಲ. ನಾನು ನಿಜವಾಗಿಯೂ ಹೈದರಾಬಾದ್ನಿಂದಲೇ ವಿಡಿಯೊ ಕಳುಹಿಸಿದ್ದೆ. ಬರ್ತ್ ಡೇ ಕೇಕ್ ಕಟ್ ಮಾಡಿ ಹೈದರಾಬಾದ್ಗೆ ಹೋಗಿಬಿಟ್ಟಿದ್ದೆ. ನಮ್ಮ ಮನೆಯಿಂದ ಬಿರಿಯಾನಿ ಮಾಡುವ ವಿಡಿಯೊ ಹಾಕಿದ್ದೆ. ನಾನು ಡ್ರಗ್ಸ್ ತೆಗೆದುಕೊಂಡಿಲ್ಲ. ಅವರು ಎಲ್ಲಾ ಟೆಸ್ಟ್ಗಳನ್ನು ಮಾಡಿದ್ದಾರೆ. ಸುಖಾಸುಮ್ಮನೆ ನನ್ನನ್ನು ಸಿಲುಕಿಸುವ ಕೆಲಸ ಆಗ್ತಿದೆ ಎಂದು ಆರೋಪಿಸಿದ್ದಾರೆ.
ರೇವ್ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಪೊಲೀಸರ ಮುಂದೆ ಬಿಲ್ಡಪ್ ಕೊಡಲು ಹೋಗಿ ಲಾಕ್ ಆಗಿದ್ದಾರೆ. ನಾನು ತೆಲುಗಿನ ಫೇಮಸ್ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.
ಮಾಧ್ಯಮಗಳ ಮೇಲೆ ಗರಂ;
ಇನ್ನು, ಇಂದು ಕೆ ಸಿ ಜನರಲ್ ಆಸ್ಪತ್ರೆಗೆ ಹೇಮಾ ಅವರನ್ನು ಕರೆತಂದು ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ನಂತರ ಅಲ್ಲಿಂದ ಹೊರಬಂದ ಹೇಮಾ, ಮಾಧ್ಯಮ ಸಿಬ್ಬಂದಿಗಳನ್ನು ಕಂಡಕೂಡಲೇ ಗರಂ ಆಗಿದ್ದಾರೆ. ತೆಲುಗಿನಲ್ಲಿ ಕೂಗಾಡುತ್ತ ಪೊಲೀಸರ ಜೀಪು ಹತ್ತಿಕೊಂಡು ಹೋಗಿದ್ದಾರೆ.
The Central Crime Branch probing the Bengaluru rave party case arrested Telugu film actress Hema following interrogation on Monday. The rave party was organised on May 19 at a farmhouse near Electronic City.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm