ಬ್ರೇಕಿಂಗ್ ನ್ಯೂಸ್
04-06-24 11:39 am Bangalore Correspondent ಕರ್ನಾಟಕ
ಬೆಂಗಳೂರು, ಜೂ 04: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಮತಎಣಿಕೆಯ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮತಗಳ ಅಂತರದಲ್ಲಿ ಮುನ್ನುಗ್ಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರು 1 ಲಕ್ಷ 24 ಸಾವಿರದ 943 ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರ ಗೆಲುವು ಬಹುತೇಕ ಪಕ್ಕಾ ಎನ್ನಲಾಗಿದೆ. ಡಾ.ಸಿ.ಎನ್. ಮಂಜುನಾಥ್ ಅವರ ಮನೆಯಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ.
ಪ್ರತಿ ಸುತ್ತಿನಲ್ಲೂ ಅಂತರ ಹೆಚ್ಚಿಸಿಕೊಂಡ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ತಮ್ಮ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಕನಕಪುರ ಹೊರತುಪಡಿಸಿ ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರಿಗೆ 7 ವಿಧಾನಸಭಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ. ಕೇವಲ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಮುನ್ನಡೆ ಸಾಧಿಸಿದ್ದಾರೆ.
ಲೋಕಸಭಾ ಕ್ಷೇತ್ರದಲ್ಲಿ ಹಿನ್ನೆಡೆಯ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಕಂಗಾಲಾಗಿದ್ದಾರೆ. ಕಾಂಗ್ರೆಸ್ ಮುಖಂಡರ ಜೊತೆ ಡಿ.ಕೆ ಸುರೇಶ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ಚರ್ಚಿಸಿದ್ದಾರೆ.
ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಇದೀಗ ಡಿ.ಕೆ. ಸುರೇಶ್ ವಿರುದ್ಧ ಡಾ. ಮಂಜುನಾಥ್ ದೊಡ್ಡ ಮಟ್ಟದ ಮುನ್ನಡೆ ಕಾಯ್ದುಕೊಂಡಿದ್ದಾರೆ.
Election result, Dr Manjunath leading, DK Suresh faces heavy shock, police security tightened at Bangalore rural. BJP’s Dr CN Manjunath Leading By 72,000 Votes Against DK Suresh In Bengaluru Rural Constituency
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm