ಬ್ರೇಕಿಂಗ್ ನ್ಯೂಸ್
04-06-24 04:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.04: ಈ ಬಾರಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ 3 ಬಾರಿ ಸಂಸದರಾಗಿದ್ದ ಡಿಕೆ ಸುರೇಶ್ ವಿರುದ್ಧ ಸ್ಪರ್ಧೆಗಿಳಿದಿದ್ದ ಡಾ. ಮಂಜುನಾಥ್ ಗೆದ್ದು ಬೀಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಜನ ಬದಲಾಣೆ ಬಯಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದ ಡಾ. ಮಂಜುನಾಥ್, ಡಿಕೆ ಸುರೇಶ್ ವಿರುದ್ಧ ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಡಿಕೆ ಸುರೇಶ್, ಫಲಿತಾಂಶ ಕಂಡು ಬೇಸರದಿಂದ ಡಿಕೆಶಿ ಮನೆಯಿಂದ ಹೊರನಡೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ಆದ್ರೆ ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ, ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೇಸರದ ಮಾತುಗಳನ್ನು ಹಾಡಿದ್ರು.
ಡಾ. ಮಂಜುನಾಥ್ ಗೆಲುವು ಖಚಿತವಾಗ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಮತದಾರ ಪ್ರಭುಗಳು ಕೊಟ್ಟಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಅಭಿನಂದನೆ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ್ರು.
ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದ್ರೆ ಮತದಾರರ ತೀರ್ಮಾನ ಬೇರೆ ಆಗಿದೆ. ಕ್ಷೇತ್ರಕ್ಕೆ ಕಾಲಿಟ್ಟ ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರಿಗೆ ನಾನು ಸದಾ ಜೊತೆಯಾಗಿರುತ್ತೇನೆ ಎಂದು ಡಿಕೆ ಸುರೇಶ್ ಹೇಳಿದ್ರು.
DK Suresh looses election in Bangalore rural, says I have accepted defeat against Dr Manjunath.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm