ಬ್ರೇಕಿಂಗ್ ನ್ಯೂಸ್
04-12-20 06:12 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.4 : ಮರಾಠ ಅಭಿವೃದ್ಧಿ ನಿಗಮವನ್ನು ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಬೆಂಗಳೂರಿನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಬೆಂಬಲಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 15 ಸಾವಿರ ಪೊಲೀಸರನ್ನು ರಾಜಧಾನಿಯಲ್ಲಿ ನಿಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು. ಹೀಗಾಗಿ, 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಪೊಲೀಸರು ಎಲ್ಲಾ ಕಡೆ ಗಸ್ತು ತಿರುಗಲಿದ್ದಾರೆ. 5 ಜನ ಹೆಚ್ಚುವರಿ ಕಮಿಷನರ್ ದರ್ಜೆಯ ಅಧಿಕಾರಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ. ಇದುವರೆಗೂ ಬೆಂಗಳೂರಿನಲ್ಲಿ ಕರ್ನಾಟಕ ಬಂದ್ಗೆ ಯಾರೂ ನಮ್ಮ ಬಳಿ ಅನುಮತಿ ಕೇಳಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.


ಮುಂಜಾಗ್ರತಾ ಕ್ರಮವಾಗಿ 35 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ನೀಡುವುದಿಲ್ಲ. ಕರ್ನಾಟಕ ಬಂದ್ಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಬೆಂಬಲ ಸೂಚಿಸಿಲ್ಲ. ಹೀಗಾಗಿ, ಆ ಬಸ್ಗಳನ್ನು ತಡೆಯುವ ಹಾಗೆ ಇಲ್ಲ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ಮಾಮೂಲಿನಂತೆ ಸಂಚರಿಸಲಿವೆ ಎಂದಿದ್ದಾರೆ.

ಇನ್ನು ಆಯಾ ವಿಭಾಗದ ಡಿಸಿಪಿಗಳಿಗೆ ಬಂದ್ನ ನಿರ್ವಹಣೆಯ ಹೊಣೆ ವಹಿಸಲಾಗಿದೆ. 300 ಪೊಲೀಸ್ ವ್ಯಾನ್ಗಳು ನಗರದಾದ್ಯಂತ ವಿಶೇಷ ಗಸ್ತು ನಡೆಸಲಿದೆ. ಯಾರೂ ಕೂಡ ಭಯ ಪಡುವ ಅಗತ್ಯ ಇಲ್ಲ. ಜನರು ಎಂದಿನಂತೆ ತಮ್ಮ ಚಟುವಟಿಕೆಗಳನ್ನು ಮಾಡಿಕೊಳ್ಳಬೇಕು. ಯಾರು ಕೂಡ ಪ್ರತಿಭಟನೆಗೆ ಹಾಗೂ ಮೆರವಣಿಗೆಗೆ ಅನುಮತಿ ಕೋರಿಲ್ಲ. ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
Karnataka Bandh Over 15,000 police personnel will be deployed across the city to watch out for protests said Bangalore Commission, Kamal Pant.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am