ಬ್ರೇಕಿಂಗ್ ನ್ಯೂಸ್
05-06-24 05:48 pm HK News Desk ಕರ್ನಾಟಕ
ಬೀದರ್, ಜೂನ್ 5: ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸೋಲುಣಿಸಿ ಸಂಸತ್ಗೆ ಪ್ರವೇಶಿಸಿರುವ ಬೀದರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಪುತ್ರ 26 ವರ್ಷದ ಸಾಗರ್ ಖಂಡ್ರೆ ದೇಶದ ಅತಿ ಕಿರಿಯ ಸಂಸದರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಪುತ್ರ ಸಾಗರ್ 26 ವರ್ಷದ ಯುವಕನಾಗಿದ್ದು, ಬಿಬಿಎ- ಎಲ್ಎಲ್ಬಿ ಪದವೀಧರ. ರಾಜಕೀಯ ಕಣಕ್ಕಿಳಿದು ಮೊದಲ ಸ್ಪರ್ಧೆಯಲ್ಲೇ ಗೆಲುವಿನ ನಗೆ ಬೀರಿದ್ದಾರೆ. 2019ರ ಚುನಾವಣೆಯಲ್ಲಿ ಬೀದರಿನಲ್ಲಿ ತನ್ನ ತಂದೆಯನ್ನು ಸೋಲಿಸಿದ್ದ ಖೂಬಾ ವಿರುದ್ಧ ಕಳೆದ ಸಲಕ್ಕಿಂತ ಅಧಿಕ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಆಮೂಲಕ ತಂದೆಯ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. 1,28,875 ಮತಗಳ ಅಂತರದಿಂದ ಗೆಲುವು ಕಂಡ ಸಾಗರ ಖಂಡ್ರೆ 6,66317 ಮತ ಪಡೆದಿದ್ದರು. ಎರಡು ಬಾರಿಯ ಬಿಜೆಪಿ ಸಂಸದ ಭಗವಂತ ಖೂಬಾ 5,37442 ಮತಗಳನ್ನು ಪಡೆದಿದ್ದರು.
2019ರ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಎದುರಾಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಈಶ್ವರ್ ಖಂಡ್ರೆ ಅವರನ್ನು 1,16834 ಮತಗಳಿಂದ ಸೋಲಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಮಾಜಿ ಮುಖ್ಯಮಂತ್ರಿ ಎನ್.ಧರ್ಮ ಸಿಂಗ್ ಅವರನ್ನು 92192 ಮತಗಳಿಂದ ಸೋಲಿಸಿದ್ದರು.
ರಾಜ್ಯ ಯುವ ಕಾಂಗ್ರೆಸ್ ಘಟಕದಲ್ಲಿ ಮುಂಚೂಣಿ ನಾಯಕರಾಗಿ, ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ ಸಾಗರ್, ತಮ್ಮ ತಂದೆ ಈಶ್ವರ್ ಖಂಡ್ರೆಯವರ ಗರಡಿಯಲ್ಲಿ ಹೆಜ್ಜೆಯಿಟ್ಟವರು. ಸಾಗರ್ ಅವರ ತಾತ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರು ಸಹ ಕಾಂಗ್ರೆಸ್ನಲ್ಲಿ ಸಚಿವರಾಗಿದ್ದರು.
Sagar Khandre, the 26-year-old Congress candidate fighting the elections for the first time, has won the Bidar seat by defeating the union minister Bhagwant Khuba by a margin of 1.29 lakh votes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm