ಬ್ರೇಕಿಂಗ್ ನ್ಯೂಸ್
06-06-24 03:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿಸಿ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಮಾತನ್ನು ಸ್ವತಃ ಸಚಿವ ನಾಗೇಂದ್ರ ಸ್ಪಷ್ಟಪಡಿಸಿಲ್ಲ. ಸುದ್ದಿಗೋಷ್ಟಿ ಕರೆದು ಎಲ್ಲವನ್ನೂ ಹೇಳ್ತೀನಿ ಎಂದಿದ್ದಾರೆ. ಆದರೆ, ಈ ಬಗ್ಗೆ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷಕ್ಕೆ ಮುಜುಗರ ಆಗಬಾರದು ಅಂತ ನಾಗೇಂದ್ರ ಅವರೇ ರಾಜಿನಾಮೆ ನೀಡಿದ್ದಾರೆ. ನಾವೇನೂ ರಾಜಿನಾಮೆ ಕೇಳಿರಲಿಲ್ಲ ಎಂದಿದ್ದಾರೆ.
ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ನಾಗೇಂದ್ರ ರಾಜಿನಾಮೆ ನೀಡಿದ್ದಾರೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.
ಅತ್ತ ಪ್ರಕರಣದಲ್ಲಿ ತನಿಖೆ ಮುಂದುವರಿಸಿರುವ ಎಸ್ಐಟಿ ಅಧಿಕಾರಿಗಳು ಸಚಿವ ನಾಗೇಂದ್ರ ಆಪ್ತರಾದ ಉದ್ಯಮಿ ನಾಗರಾಜು ನೆಕ್ಕಂಟಿ ಹಾಗೂ ನಾಗೇಶ್ವರ್ ರಾವ್ ಎಂಬವರನ್ನು ಬುಧವಾರ ಬಂಧಿಸಿದ್ದರು. ಇದರೊಂದಿಗೆ ಬಂಧಿತರ ಸಂಖ್ಯೆ ಐದಕ್ಕೇರಿತ್ತು. ಅತ್ತ ಬಹುಕೋಟಿ ರೂಪಾಯಿ ಹಗರಣ ಆಗಿರುವುದರಿಂದ ಸಿಬಿಐ ಅಧಿಕಾರಿಗಳು ತನಿಖೆ ಎತ್ತಿಕೊಂಡಿದ್ದರು.
ವಾಲ್ಮೀಕಿ ನಿಗಮದ ಖಾತೆಯಿಂದ 94 ಕೋಟಿ ರೂ. ಹೈದರಾಬಾದ್ನ ಖಾತೆಗಳಿಗೆ ಸಂದಾಯ ಆಗಿತ್ತು. ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಗೆ ವರ್ಗಾಯಿಸಿರುವ ಸಂಚಿನಲ್ಲಿ ಬಳ್ಳಾರಿ ಮೂಲದ ನಾಗರಾಜು, ನಾಗೇಶ್ವರ ರಾವ್ ಪಾತ್ರ ದೃಢಪಟ್ಟಿದೆ. ಹೀಗಾಗಿ, ಇಬ್ಬರನ್ನೂ ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಏಳು ದಿನ ಕಸ್ಟಡಿಗೆ ಪಡೆಯಲಾಗಿದೆ.
ಹಗರಣದ ಪ್ರಧಾನ ಆರೋಪಿ ಹೈದರಾಬಾದ್ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿ 18 ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ 94 ಕೋಟಿ ರೂ. ಹಣವನ್ನು ವರ್ಗಾಯಿಸಿ ಡ್ರಾ ಮಾಡಿದ್ದಾನೆ. ಈ ಹಣ ಎಲ್ಲಿ ಹೋಗಿದೆ ಎಂಬುದರ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಜತೆಗೆ, ಸತ್ಯನಾರಾಯಣ ಹಾಗೂ ಇತರ ಆರೋಪಿಗಳ ನಂಟಿನ ರಹಸ್ಯ ಭೇದಿಸಲಾಗುತ್ತಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪೂರ್ವ ವಲಯದ ಡೆಪ್ಯುಟಿ ಜನರಲ್ ಮ್ಯಾನೇಜರ್ ಜೆ ಮಹೇಶ್ ನೀಡಿದ ದೂರಿನ ಅನ್ವಯ ಎಂಜಿ ರಸ್ತೆಯ ಶಾಖೆಯ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರಾವಲ್, ಉಪ ವ್ಯವಸ್ಥಾಪಕಿ ಡಿ ದೀಪಾ, ಅಧಿಕಾರಿ ವಿ ಕೃಷ್ಣ ಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.
Karnataka Deputy Chief Minister D K Shivakumar on Thursday said Minister B Nagendra has offered to resign, following allegations against him in connection with an illegal money transfer case, and indicated that he may quit the Siddaramaiah Cabinet later in the day.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm