ಬ್ರೇಕಿಂಗ್ ನ್ಯೂಸ್
06-06-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
Eleven members of the Legislative Council have been elected unopposed to the Legislative Council from the Legislative Assembly. Ivan D'Souza, Ct Ravi and Boseraju are among the 11 elected unopposed members of the Legislative Council.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm