ಬ್ರೇಕಿಂಗ್ ನ್ಯೂಸ್
07-06-24 05:17 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 07: ಭೀಕರ ಅಪಘಾತವೊಂದರಲ್ಲಿ ಕಾರು ಕಾಲುವೆಗೆ ಬಿದ್ದು ಮೂವರು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ನಡೆದಿದೆ.
ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರು ಬೆಚ್ಚಿಬಿದ್ದಿದ್ದಾರೆ.
ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ.
ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿವಕುಮಾರ್ ಎಂಬುವವರು ಗಾಯಗೊಂಡಿದ್ದು, ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ.
ಮಳೆಯಿಂದಾಗಿ ವಿದ್ಯುತ್ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ವಾಟದಹೊಸಹಳ್ಳಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದರಂತೆ ನಾಲ್ವರು ಅಧಿಕಾರಿಗಳು ಕಾರಿನಲ್ಲಿ ನಗರಗೆರೆಯಿಂದ ವಾಟದಹೊಸಹಳ್ಳಿ ಬರುತ್ತಿದ್ದರು. ನಗರಗೆರೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಬಿದ್ದಿದೆ. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಘಟನೆ ಬಳಿಕ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Three BESCOM staffs killed in road accident at chikkaballapur after their breeza car lost control and fell to a pond. One of the body of a bescome staff was hanging at the tree beside the pond.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm