ಬ್ರೇಕಿಂಗ್ ನ್ಯೂಸ್
08-06-24 10:53 am HK News Desk ಕರ್ನಾಟಕ
ಮಂಡ್ಯ, ಜೂನ್ 8: ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ. ಫುಲ್ ಟೈಮ್ ಪಕ್ಷದಲ್ಲಿಯೇ ತೊಡಗಿಸಿಕೊಳ್ಳುತ್ತೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಸಿನಿಮಾ ರಂಗವನ್ನು ಸದ್ಯಕ್ಕೆ ಪೂರ್ತಿ ಬಂದ್ ಮಾಡಿದ್ದೇನೆ. ಇನ್ನು ಮುಂದೆ ಸಂಪೂರ್ಣ ರಾಜಕಾರಣದಲ್ಲಿರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ. ಶೀಘ್ರ ದಲ್ಲಿ ಚನ್ನಪಟ್ಟಣದ ಜನತೆಗೆ ಕೃತಜ್ಞತೆ ಸಲ್ಲಿಸಲಾಗುವುದು. ನಂತರ ಮಂಡ್ಯದಲ್ಲಿ ಸಭೆ ನಡೆಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದು ಹೇಳಿದರು.
ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಚುನಾವಣೆ ವೇಳೆ ವೇದಿಕೆ ಹಂಚಿಕೊಳ್ಳಲಾಗದಿದ್ದರೂ ಕುಮಾರಣ್ಣನ ಗೆಲುವಿಗೆ ಸಹಕಾರ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜನಪ್ರತಿನಿಧಿಗಳಾದವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಮಾತುಗಳ ಮೇಲೆ ಹಿಡಿತವಿರಬೇಕು. ಅಧಿಕಾರದಲ್ಲಿದ್ದಾಗ ಏನು ಬೇಕಾದರೂ ಮಾತಾಡಬಹುದೆಂಬ ಉದ್ಧಟತನವನ್ನು ಬಿಡಬೇಕು. ಮದ್ದೂರು ಶಾಸಕರು ನೀಡಿದ್ದ ಅಸಂಬದ್ಧ ಹೇಳಿಕೆಗೆ ಈಗ ಜನರೇ ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯದಿಂದ ನಿಲ್ಲಬೇಕೆಂಬುದು ಜನರ ಅಪೇಕ್ಷೆಯಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ವರ್ಗದ ಜನರು ಕುಮಾರಣ್ಣಗೆ ಆಶೀರ್ವಾದ ಮಾಡಿದ್ದಾರೆ. ಇನ್ನು ಐದು ವರ್ಷ ಕುಮಾರಣ್ಣ ಜನಪರ ಕೆಲಸ ಮಾಡುತ್ತಾರೆ ಎಂದರು.
ಚುನಾವಣೆಗೆ ಮುನ್ನ ಅಥವಾ ನಂತರ ಇಂತಹ ಖಾತೆ ಬೇಕೆಂದು ಎಚ್ಡಿಕೆಯವರು ಬೇಡಿಕೆ ಇಟ್ಟಿಲ್ಲ. ಎರಡು ಬಾರಿ ಸಿಎಂ ಆಗಿದ್ದರು. ನಾಡಿಗೆ ಅವರದೇ ಆದ ಸೇವೆ ಸಲ್ಲಿಸಿದ್ದಾರೆ. ಮೂರು ಬಾರಿ ಸಂಸದರಾಗಿದ್ದಾರೆ. ಈ ಅನುಭವದ ಆಧಾರದ ಮೇಲೆ ಕೇಂದ್ರದ ನಾಯಕರು ಸಂಪುಟದಲ್ಲಿ ಸ್ಥಾನ ಕೊಡಬಹುದು. ಈ ನಾಡನ್ನು ಕಟ್ಟಲು ಬಿಜೆಪಿಯ ಕೇಂದ್ರದ ನಾಯಕರು ಕುಮಾರಸ್ವಾಮಿ ಅವರನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ ಎಂದು ಪರೋಕ್ಷವಾಗಿ ನಿಖಿಲ್ ತಂದೆ ಕೇಂದ್ರ ಸಚಿವರಾಗಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟರು.
The superiors have given me the responsibility of building the party in the state. So he no longer acts in movies. JDS Youth Unit State President Nikhil Kumaraswamy said that there is no idea of making a movie at the moment.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm