ಬ್ರೇಕಿಂಗ್ ನ್ಯೂಸ್
08-06-24 02:20 pm HK News Desk ಕರ್ನಾಟಕ
ಮೈಸೂರು, ಜೂನ್.8: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಬಿಜೆಪಿಯವರು ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿದ್ದರು. ಜನರು ಅವರನ್ನು ಬೆಂಬಲಿಸಿದ್ದಾರೆ. ಹೀಗಾಗಿ ಈ ಗ್ಯಾರಂಟಿಯನ್ನು ನಿಲ್ಲಿಸೋದೆ ಒಳಿತು ಎಂದು ಮೈಸೂರು ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು. ಶೇಕಡಾ 70% ರಷ್ಟು ಮೇಲ್ವರ್ಗದವರು ಈ ಯೋಜನೆಯಲ್ಲಿ ಫಲಾನುಭವಿಗಳಗಿದ್ದಾರೆ. ಆದರೆ ಚುನಾವಣೆಯಲ್ಲಿ ಜನರು ಕಾಂಗ್ರೆಸನ್ನು ತಿರಸ್ಕಾರ ಮಾಡಿದ್ದಾರೆ. ಬೆಂಜ್ ಕಾರ್ ಹೊಂದಿರುವವನು, 25 ಸಾವಿರ ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ರೀ ಲುಕ್ ಮಾಡುವ ಅಗತ್ಯ ಇದೆ. ಇದಕ್ಕೆ ಉದಾಹರಣೆ ಎಂದರೆ ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600 ಕ್ಕೂ ಹೆಚ್ಚು ಮತ ನೀಡಿದ್ರೆ, ನನಗೆ ಕೇವಲ ಮೂರು, ಏಳು ಮತಗಳನ್ನ ನೀಡಿದ್ದಾರೆ. ಒಕ್ಕಲಿಗರು ಕೂಡ ನನಗೆ ಮತ ಹಾಕಿಲ್ಲ ಕೆಪಿಸಿಸಿ ವಕ್ತಾರರೂ ಆಗಿರುವ ಎಂ. ಲಕ್ಷ್ಮಣ್ ಅಸಮಾಧಾನ ಹೊರ ಹಾಕಿದ್ದಾರೆ.


ಮತದಾರರು ಸ್ಯಾಡಿಸ್ಟ್ ಇದ್ದಾರೆ..!
ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದ್ರೆ ಸಿದ್ದರಾಮಯ್ಯ ಏನ್ ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ ? ಮತದಾರರಲ್ಲಿ ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ ಎಂದು ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ರು. ಎಲ್ಲಿಗಾದ್ರೂ ಐದು ರೂಪಾಯಿ ಕೊಟ್ಟಿದ್ರಾ? ಆದ್ರೆ ಸಿದ್ದರಾಮಯ್ಯ ಎಷ್ಟು ಕೆಲಸ ಮಾಡಿದ್ದಾರೆ. ಜಯದೇವ ಆಸ್ಪತ್ರೆ ಸೇರಿದಂತೆ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದ್ರೂ ಇದ್ದಾರಾ ? ಸಾಹೇಬರು ಯಾವುದನ್ನೂ ಹೇಳಿಕೊಳ್ಳೋದಿಲ್ಲ. ಆದ್ರೆ ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟು ಬಾರಿ ನೋವು ಕೊಡ್ತೀರಿ ಎಂದು ಮತದಾರರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
People don't like the Congress guarantee. They have shown that through the result. The BJP was talking against our guarantee. People have supported him. Therefore, it is better to discontinue this guarantee," said M. Lakshman, the defeated Congress candidate from Mysuru constituency.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm