ಬ್ರೇಕಿಂಗ್ ನ್ಯೂಸ್
11-06-24 11:01 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11: ಕೊಲೆ ಪ್ರಕರಣ ಒಂದರಲ್ಲಿ ಖ್ಯಾತ ಚಿತ್ರನಟ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ ಮನೆಯಿಂದ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ದರ್ಶನ್ ಜೊತೆಗಿದ್ದ ಹತ್ತು ಮಂದಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಭಾನುವಾರ ಬೆಳಗ್ಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಯುವಕನ ಶವ ಪತ್ತೆಯಾಗಿತ್ತು. ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದರು. ಚಿತ್ರದುರ್ಗದಿಂದ ಯುವಕನನ್ನು ಕರೆತಂದು ಬೆಂಗಳೂರಿನಲ್ಲಿ ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ರೇಣುಕಾಸ್ವಾಮಿ ಎಂಬ ಯುವಕ ನಟ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ.



ಇದನ್ನು ಪ್ರಶ್ನಿಸಿ ದರ್ಶನ್ ಮತ್ತು ಇತರ ಯುವಕರು ಹಲ್ಲೆ ನಡೆಸಿದ್ದು, ತಲೆಗೆ ದೊಣ್ಣೆಯಲ್ಲಿ ಹೊಡೆದಿದ್ದರು ಎನ್ನಲಾಗಿದೆ. ಈ ವೇಳೆ, ರೇಣುಕಾಸ್ವಾಮಿ ಕುಸಿದು ಬಿದ್ದು ಮೃತಪಟ್ಟಿದ್ದ. ಸ್ಥಳೀಯರ ಮಾಹಿತಿಯಂತೆ ಅಪರಿಚಿತ ಶವ ಪತ್ತೆಯೆಂದು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದರು. ಬೆಂಗಳೂರಿನ ಅಪೋಲೊ ಮೆಡಿಕಲ್ ನಲ್ಲಿ ಕೆಲಸಕ್ಕಿದ್ದ ರೇಣುಕಾಸ್ವಾಮಿ ಕೊಲೆಯಾದ ಯುವಕ ಎಂದು ಪೊಲೀಸರು ಪತ್ತೆ ಮಾಡಿದ್ದರು. ತನಿಖೆಯಲ್ಲಿ ಈತ ಪವಿತ್ರಾ ಗೌಡ ಅವರ ಇನ್ ಸ್ಟಾ ಗ್ರಾಮ್ ನಲ್ಲಿ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಎನ್ನುವ ಮಾಹಿತಿ ಕಲೆಹಾಕಿದ್ದರು. ಕೊಲೆ ಕೃತ್ಯದಲ್ಲಿ ದರ್ಶನ್ ಕೈವಾಡ ಇರುವುದನ್ನು ದೃಢಪಡಿಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Kannada actor Darshan has been reportedly arrested by the Kamakshi Palya cops in connection with a murder case. According to media reports, he has been arrested in connection with the murder of a man named Renuka Swamy, who allegedly sent obscene messages to actress Pavithra Gowda. A total of 10 people have been arrested.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm