ಬ್ರೇಕಿಂಗ್ ನ್ಯೂಸ್
11-06-24 11:01 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11: ಕೊಲೆ ಪ್ರಕರಣ ಒಂದರಲ್ಲಿ ಖ್ಯಾತ ಚಿತ್ರನಟ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ ಮನೆಯಿಂದ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ದರ್ಶನ್ ಜೊತೆಗಿದ್ದ ಹತ್ತು ಮಂದಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಭಾನುವಾರ ಬೆಳಗ್ಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಯುವಕನ ಶವ ಪತ್ತೆಯಾಗಿತ್ತು. ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದರು. ಚಿತ್ರದುರ್ಗದಿಂದ ಯುವಕನನ್ನು ಕರೆತಂದು ಬೆಂಗಳೂರಿನಲ್ಲಿ ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ರೇಣುಕಾಸ್ವಾಮಿ ಎಂಬ ಯುವಕ ನಟ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ.



ಇದನ್ನು ಪ್ರಶ್ನಿಸಿ ದರ್ಶನ್ ಮತ್ತು ಇತರ ಯುವಕರು ಹಲ್ಲೆ ನಡೆಸಿದ್ದು, ತಲೆಗೆ ದೊಣ್ಣೆಯಲ್ಲಿ ಹೊಡೆದಿದ್ದರು ಎನ್ನಲಾಗಿದೆ. ಈ ವೇಳೆ, ರೇಣುಕಾಸ್ವಾಮಿ ಕುಸಿದು ಬಿದ್ದು ಮೃತಪಟ್ಟಿದ್ದ. ಸ್ಥಳೀಯರ ಮಾಹಿತಿಯಂತೆ ಅಪರಿಚಿತ ಶವ ಪತ್ತೆಯೆಂದು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದರು. ಬೆಂಗಳೂರಿನ ಅಪೋಲೊ ಮೆಡಿಕಲ್ ನಲ್ಲಿ ಕೆಲಸಕ್ಕಿದ್ದ ರೇಣುಕಾಸ್ವಾಮಿ ಕೊಲೆಯಾದ ಯುವಕ ಎಂದು ಪೊಲೀಸರು ಪತ್ತೆ ಮಾಡಿದ್ದರು. ತನಿಖೆಯಲ್ಲಿ ಈತ ಪವಿತ್ರಾ ಗೌಡ ಅವರ ಇನ್ ಸ್ಟಾ ಗ್ರಾಮ್ ನಲ್ಲಿ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಎನ್ನುವ ಮಾಹಿತಿ ಕಲೆಹಾಕಿದ್ದರು. ಕೊಲೆ ಕೃತ್ಯದಲ್ಲಿ ದರ್ಶನ್ ಕೈವಾಡ ಇರುವುದನ್ನು ದೃಢಪಡಿಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Kannada actor Darshan has been reportedly arrested by the Kamakshi Palya cops in connection with a murder case. According to media reports, he has been arrested in connection with the murder of a man named Renuka Swamy, who allegedly sent obscene messages to actress Pavithra Gowda. A total of 10 people have been arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm