ಬ್ರೇಕಿಂಗ್ ನ್ಯೂಸ್
11-06-24 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.11: ಚಿತ್ರದುರ್ಗ ಮೂಲದ ಯುವಕನ ಕೊಲೆ ಪ್ರಕರಣ ಸಂಬಂಧಿಸಿ ನಟ ದರ್ಶನ್ ತೂಗುದೀಪ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯದ ಮೋರಿ ಒಂದರಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಂಧಿತರಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಮಗ ವಿನಯ್ ಮತ್ತು ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಎಂಬವರೂ ಸೇರಿದ್ದಾರೆ. ಚಿತ್ರದುರ್ಗ ನಗರದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ವಿನಯ್ ಗೆ ಸೇರಿ ಮನೆಯಲ್ಲಿಟ್ಟು ಹಲ್ಲೆ ನಡೆಸಿದ್ದಾರೆ. ಕೊಲೆಗೈದು ಮೋರಿಗೆ ಎಸೆದು ಹೋಗಿದ್ದರು. ಈ ಕೃತ್ಯದಲ್ಲಿ ದರ್ಶನ್ ಅವರ ಪಾತ್ರವೂ ಇದೆಯೆಂಬ ಮಾಹಿತಿ ಆಧರಿಸಿ ಪೊಲೀಸರು ಬಂಧನ ಮಾಡಿದ್ದಾರೆ.
ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಮೆಸ್ಕಾಂ ಅಧಿಕಾರಿಯಾಗಿರುವ ಶಿವನಗೌಡ ಎಂಬವರ ಪುತ್ರನಾಗಿದ್ದು ಮದುವೆಯಾಗಿ ಪತ್ನಿ ಮೂರು ತಿಂಗಳ ಗರ್ಭಿಣಿಯೆಂದು ತಿಳಿದುಬಂದಿದೆ. ರೇಣುಕಾನನ್ನು ಶನಿವಾರ ಬೆಂಗಳೂರಿಗೆ ಕರೆತಂದಿದ್ದು, ಭಾನುವಾರ ನಸುಕಿನಲ್ಲಿ ಕೊಲೆಗೈದು ರಸ್ತೆ ಬದಿಯ ಚರಂಡಿಗೆ ಎಸೆದು ಹೋಗಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಈತ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡ ಎಂಬಾಕೆಗೆ ಪದೇ ಪದೇ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಇದೇ ಕಾರಣಕ್ಕೆ ದರ್ಶನ್ ಮತ್ತು ತಂಡ ಹಲ್ಲೆಗೈದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧಿಸಿ ಆರ್.ಆರ್ ನಗರ ಠಾಣೆ ಪೊಲೀಸರು ಪವಿತ್ರಾ ಗೌಡ ಅವರನ್ನೂ ವಶಕ್ಕೆ ಪಡೆದಿದ್ದಾರೆ.
Actress Pavithra Gowda taken to custody by police soon after arrest of Actor Darshan. Darshan along with nine others have been arrested by the cops in a murder case of Renuka Swamy. His body was found in a drainage near an apartment in Kamakshi Palya on Saturday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm