ಬ್ರೇಕಿಂಗ್ ನ್ಯೂಸ್
11-06-24 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.11: ಚಿತ್ರದುರ್ಗ ಮೂಲದ ಯುವಕನ ಕೊಲೆ ಪ್ರಕರಣ ಸಂಬಂಧಿಸಿ ನಟ ದರ್ಶನ್ ತೂಗುದೀಪ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯದ ಮೋರಿ ಒಂದರಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಂಧಿತರಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಮಗ ವಿನಯ್ ಮತ್ತು ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಎಂಬವರೂ ಸೇರಿದ್ದಾರೆ. ಚಿತ್ರದುರ್ಗ ನಗರದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ವಿನಯ್ ಗೆ ಸೇರಿ ಮನೆಯಲ್ಲಿಟ್ಟು ಹಲ್ಲೆ ನಡೆಸಿದ್ದಾರೆ. ಕೊಲೆಗೈದು ಮೋರಿಗೆ ಎಸೆದು ಹೋಗಿದ್ದರು. ಈ ಕೃತ್ಯದಲ್ಲಿ ದರ್ಶನ್ ಅವರ ಪಾತ್ರವೂ ಇದೆಯೆಂಬ ಮಾಹಿತಿ ಆಧರಿಸಿ ಪೊಲೀಸರು ಬಂಧನ ಮಾಡಿದ್ದಾರೆ.
ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಮೆಸ್ಕಾಂ ಅಧಿಕಾರಿಯಾಗಿರುವ ಶಿವನಗೌಡ ಎಂಬವರ ಪುತ್ರನಾಗಿದ್ದು ಮದುವೆಯಾಗಿ ಪತ್ನಿ ಮೂರು ತಿಂಗಳ ಗರ್ಭಿಣಿಯೆಂದು ತಿಳಿದುಬಂದಿದೆ. ರೇಣುಕಾನನ್ನು ಶನಿವಾರ ಬೆಂಗಳೂರಿಗೆ ಕರೆತಂದಿದ್ದು, ಭಾನುವಾರ ನಸುಕಿನಲ್ಲಿ ಕೊಲೆಗೈದು ರಸ್ತೆ ಬದಿಯ ಚರಂಡಿಗೆ ಎಸೆದು ಹೋಗಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಈತ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡ ಎಂಬಾಕೆಗೆ ಪದೇ ಪದೇ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಇದೇ ಕಾರಣಕ್ಕೆ ದರ್ಶನ್ ಮತ್ತು ತಂಡ ಹಲ್ಲೆಗೈದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧಿಸಿ ಆರ್.ಆರ್ ನಗರ ಠಾಣೆ ಪೊಲೀಸರು ಪವಿತ್ರಾ ಗೌಡ ಅವರನ್ನೂ ವಶಕ್ಕೆ ಪಡೆದಿದ್ದಾರೆ.
Actress Pavithra Gowda taken to custody by police soon after arrest of Actor Darshan. Darshan along with nine others have been arrested by the cops in a murder case of Renuka Swamy. His body was found in a drainage near an apartment in Kamakshi Palya on Saturday.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm