ಬ್ರೇಕಿಂಗ್ ನ್ಯೂಸ್
11-06-24 03:31 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11: ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ, ಪಕ್ಷದ ಜಿಲ್ಲಾ ಮುಖಂಡರ ಜೊತೆಗೆ ಸಮನ್ವಯ ಕೊರತೆ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ ಉಸ್ತುವಾರಿ ಸಚಿವರ ಬದಲಾವಣೆಯಾಗಲಿದೆ ಎನ್ನುವ ಮಾಹಿತಿಯಿದೆ. ಪರಿಷ್ಕೃತ ಉಸ್ತುವಾರಿ ಸಚಿವರ ಪಟ್ಟಿ ಸದ್ಯದಲ್ಲೇ ಹೊರಬೀಳುವ ಸಾಧ್ಯತೆಯಿದೆ.
ರಾಯಚೂರು ಮೂಲದ ಸಚಿವ ಎನ್.ಎಸ್ ಬೋಸರಾಜು ಕೊಡಗು ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ಬಯಸಿದ್ದು, ನಾಗೇಂದ್ರ ರಾಜಿನಾಮೆಯಿಂದ ತೆರವಾಗುವ ಬಳ್ಳಾರಿ ಉಸ್ತುವಾರಿ ಪಡೆಯಲು ಕಣ್ಣಿಟ್ಟಿದ್ದಾರೆ. ಮೈಸೂರು ಜಿಲ್ಲೆಯ ಉಸ್ತುವಾರಿ ಹೊಂದಿರುವ ಡಾ.ಎಚ್.ಸಿ ಮಹದೇವಪ್ಪ ಅವರು ಚಾಮರಾಜನಗರ ಉಸ್ತುವಾರಿ ಬಯಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು, ಕೆ.ವೆಂಕಟೇಶ್ ಅವರಿಗೆ ಮೈಸೂರು ಉಸ್ತುವಾರಿ ನೀಡುವ ನಿರೀಕ್ಷೆಯಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಹೊಂದಿದ್ದು, ಕಾರ್ಯ ಬಾಹುಳ್ಯದ ಒತ್ತಡದ ಕಾರಣ ಬಿಡುಗಡೆ ಬಯಸಿದ್ದಾರೆ ಎನ್ನಲಾಗುತ್ತಿದೆ. ಅವರಿಗೆ ಸಣ್ಣ ಜಿಲ್ಲೆ ಮತ್ತು ನಿಕಟ ಒಡನಾಟ ಇರುವ ಕೊಡಗು ಉಸ್ತುವಾರಿ ಕೊಡುವ ಸಾಧ್ಯತೆಯಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಸೂಕ್ಷ್ಮವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಬೇರೆ ಯಾರಿಗೆ ಕೊಡಬೇಕು ಎನ್ನುವ ಬಗ್ಗೆ ತೀರ್ಮಾನ ಆಗಿಲ್ಲ. ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬದಲಾಯಿಸಲು ಪಕ್ಷದ ಕಾರ್ಯಕರ್ತರೇ ಅಭಿಯಾನ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ವೈಫಲ್ಯ, ಎರಡು ಅವಧಿಯಲ್ಲಿ ಶಾಸಕರಿಲ್ಲದೆ ಪಕ್ಷಕ್ಕಾದ ಹಿನ್ನಡೆಯಿಂದಾಗಿ ಜಿಲ್ಲಾ ಮುಖಂಡರ ಜೊತೆಗೆ ಸಮನ್ವಯ ಸಾಧಿಸುವುದು ಮತ್ತು ಜಿಪಂ, ತಾಪಂ ಚುನಾವಣೆಗೆ ತಯಾರಿ ನಡೆಸಬೇಕಾದ ಕಾರಣ ಸೂಕ್ತ ವ್ಯಕ್ತಿಗೆ ಉಸ್ತುವಾರಿ ನೀಡಬೇಕು ಎನ್ನುವ ಆಗ್ರಹವನ್ನು ಅಲ್ಲಿನ ನಾಯಕರು ಮುಂದಿಟ್ಟಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಪಕ್ಷದ ಸ್ಥಳೀಯ ಮುಖಂಡರ ವಿಶ್ವಾಸ ಪಡೆಯಲು ವಿಫಲರಾದ ಸಚಿವ ಕೆ.ಎನ್. ರಾಜಣ್ಣ ಅವರನ್ನು ಬದಲಿಸಬೇಕೆಂಬ ಒತ್ತಾಯ ಇದೆ. ರಾಜಣ್ಣ ಅವರನ್ನು ಕೈಬಿಟ್ಟು ಅಲ್ಲಿ ಬೇರೊಬ್ಬ ವ್ಯಕ್ತಿಗೆ ಉಸ್ತುವಾರಿ ನೀಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿಗೆ ಉಸ್ತುವಾರಿ ವಹಿಸಿಕೊಳ್ಳುವ ಅನುಭವಿ ವ್ಯಕ್ತಿ ಯಾರು ಎನ್ನುವ ಚರ್ಚೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬಗ್ಗೆ ಟೀಕೆ ಇಲ್ಲದೇ ಇರುವುದರಿಂದ ಅವರನ್ನು ಮುಂದುವರಿಸುವ ಸಾಧ್ಯತೆಯೂ ಇದೆ.
Karnataka Chief Minister Siddaramaiah has decided to replace the district in-charge ministers of some districts in the wake of the lok sabha poll debacle and lack of coordination with the party's district leaders. Udupi, Dakshina Kannada, Kodagu, Mysuru and Hassan are likely to be replaced by ministers in-charge. The revised list of ministers in charge is likely to be out soon.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm