ಬ್ರೇಕಿಂಗ್ ನ್ಯೂಸ್
12-06-24 01:14 pm HK News Desk ಕರ್ನಾಟಕ
ಮೈಸೂರು, ಜೂನ್ 12: ಯುವಕನ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಮೈಸೂರಿನ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ವಿಚಾರದಲ್ಲಿ ಅರಣ್ಯ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ದರ್ಶನ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಹಿಂದೆಯೇ ಎಫ್ ಐ ಆರ್ ದಾಖಲಿಸಿದ್ದು ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಐದು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೆ ದರ್ಶನ್ ನಿರ್ಲಕ್ಷ್ಯ ವಹಿಸಿದ್ದರು. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಪ್ರಾಪರ್ಟಿ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿತ್ತು.
ಈಗ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರುತ್ತಿದ್ದಂತೆ ಹಳೆ ಪ್ರಕರಣ ಮೈಗೆ ಬಿದ್ದುಕೊಂಡಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ದರ್ಶನ್ ತೋಟ ಹೊಂದಿದ್ದು ನಿಷೇಧಿತ ಪ್ರಭೇದದ ಬಾತುಕೋಳಿಗಳನ್ನು ಸಾಕಿದ್ದರು. ಪ್ರಕರಣ ದಾಖಲಾಗಿದ್ದರೂ ತನಿಖಾಧಿಕಾರಿ ವರ್ಗಾವಣೆಯಾದ ಬಳಿಕ ಯಾವುದೇ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಬೇಕಿದ್ದರೂ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸಿದ್ದರು.
ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರವಾಗಿದೆ. ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಹಾಗೆಯೇ ಬಿಟ್ಟಿದ್ದರು. ದರ್ಶನ್ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸಿಲ್ಲ ಎಂದು ಅಧಿಕಾರಿಗಳ ಸಬೂಬು ಹೇಳಿಕೊಂಡು ಬಂದಿದ್ದರು. ಈಗ ಬಾಡಿ ವಾರೆಂಟ್ ಪಡೆದು ವಿಚಾರಣೆಗೆ ಕರೆದೊಯ್ಯುವ ಅವಕಾಶ ಇದ್ದು ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಾರೋ ಅನ್ನುವ ಕುತೂಹಲ ಇದೆ.
Noted Kannada actor, who was arrested on Tuesday and sent to six days of police custody on murder charges, also faces a wildlife case. An FIR was filed against Darshan Thoogudeepa in January 2023 for housing four bar-headed goose in his farmhouse in T. Narasipura in Mysuru.
25-02-26 01:48 pm
Supritha Jain | ಸುಪ್ರೀತಾ ಜೈನ್
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm