ಬ್ರೇಕಿಂಗ್ ನ್ಯೂಸ್
13-06-24 08:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು.
ಆದರೆ ಗಿರೀಶ್ ನಾಯ್ಕ್ ಅವರ ಬದಲಿಗೆ ಇಂದಿನಿಂದ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಇನ್ಮುಂದೆ ಎಸಿಪಿ ಚಂದನ್ ಅವರ ಸೂಚನೆಯಲ್ಲೇ ರೇಣುಕಾಸ್ವಾಮಿ ಕೊಲೆ ಕೇಸ್ ಮುಂದೆ ಸಾಗಲಿದೆ. ಗಿರೀಶ್ ಅವರ ಬದಲಿಗೆ ಚಂದನ್ ನೇಮಕದ ಮುಖ್ಯ ಕಾರಣವೆಂದರೆ, ಚುನಾವಣೆ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ರನ್ನ ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈಗ ಚುನಾವಣೆ ಎಲ್ಲ ಮುಗಿದಿದ್ದರಿಂದ 2 ದಿನಗಳ ಹಿಂದೆಯೇ ಪುನಃ ತಮ್ಮ ಠಾಣೆಗೆ ಮರಳಬೇಕು ಎಂದು ಆದೇಶ ಬಂದಿತ್ತು. ಇದರಿಂದಾಗಿ ತನಿಖಾಧಿಕಾರಿಯನ್ನು ಚೇಂಜ್ ಮಾಡಲಾಗಿದೆ. ಮುಂದಿನ ತನಿಖೆಯ ದೃಷ್ಟಿಯಿಂದ ತನಿಖಾಧಿಕಾರಿಯನ್ನ ಬದಲಾವಣೆ ಮಾಡಲಾಗಿದೆ.
ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್, ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿ ಕೇಸ್ಅನ್ನು ಸಮರ್ಥವಾಗಿ ನಡೆಸುತ್ತಿದ್ದರು. ಇದೀಗ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್ ಹಿನ್ನಲೆಯಲ್ಲಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
Actor Darshan murder case, investigating officer Girish Naik who without any fear daringly arrested actor Darshan is now been transferred. ACP chandan is now appointed as new officer in this murder case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm