ಬ್ರೇಕಿಂಗ್ ನ್ಯೂಸ್
14-06-24 07:13 pm HK News Desk ಕರ್ನಾಟಕ
ದಾವಣಗೆರೆ, ಜೂನ್.14: ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ರಾಜಕೀಯ ಪ್ರೇರಿತ ಕೇಸ್ ದಾಖಲಿಸಲಾಗಿದೆ. ಆಕೆ ಮಾನಸಿಕ ಅಸ್ವಸ್ಥೆ, 53 ಜನರ ಮೇಲೆ ಕೇಸ್ ಹಾಕಿದ್ದಾಳೆ ಎಂದು ಗೃಹ ಸಚಿವರೇ ಹೇಳಿದ್ದರು. ಇದೀಗ ಧೀಡಿರ್ ಅಂತ ಕೇಸ್ ಗೆ ಮರುಜೀವ ಬಂದಿದ್ದು ಯಾಕೆ..? ಎಂದು ಪ್ರಶ್ನಿಸಿದ್ದಾರೆ.
ನನ್ನ ಸಹೋದರ ಸಂಬಂಧಿಗಳೇ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ, ನ್ಯಾಯ ಕೊಡಿಸಿ ಅಂತ ಯಡಿಯೂರಪ್ಪ ಮನೆಗೆ ಮಹಿಳೆ ಬಂದಿದ್ದಳು. 5 ಸಾವಿರ ಕೋಟಿ ಬಜಾಜ್ ಕಂಪನಿಯವರು ಕೊಡಬೇಕು, ಕೊಡಿಸಿ ಅಂತಾ ಗೋಗರೆದಿದ್ದಳು. ಅದು ಯಾವ ಅಕೌಂಟ್ ನಿಂದ ಬಂತು, ಯಾವ ಹಣ ಅನ್ನೋದು ತನಿಖೆ ಆಗಬೇಕು. ರಾಹುಲ್ ಗಾಂಧಿ, ಸುರ್ಜೇವಾಲಾ ಕೋರ್ಟ್ ಗೆ ಬಂದು ಹೋದ ಮೇಲೆ ಇದೆಲ್ಲ ಆಗ್ತಾ ಇದೆ.
ವಾಲ್ಮೀಕಿ ನಿಗಮದ ಭ್ರಷ್ಟಾಚಾರದಿಂದ ಶಿವಮೊಗ್ಗದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ್ರು. ಲೊಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 24 ಸ್ಥಾನ ಗೆಲ್ಲುವ ಭರವಸೆ ಇಟ್ಕೊಂಡಿದ್ರು, ಆದರೆ ಆಸೆ ಕೈಗೂಡಲಿಲ್ಲ. ಈ ರೀತಿ ಅಸಹಾಯಕರಾದ ಕೈ ಮುಖಂಡರು ದ್ವೇಷದ ರಾಜಕಾರಣ ಮಾಡ್ತಾ ಇದಾರೆ. ಬಾಲಕಿ ಸಹೋದರ, ತಾಯಿ ಮತ್ತು ಸಹೋದರಿ ಜೊತೆಗೆ ಇರಲಿಲ್ಲ. ಬಾಲಕಿ ಸಹೋದರನನ್ನು ಪ್ರಭಾವಿ ಸಚಿವರು ಕರೆಸಿ ಅವನಿಗೆ ಆಮಿಷ ತೋರಿಸಿ ಸತ್ತು ಹೋದ ಕೇಸಿಗೆ ಜೀವ ಕೊಟ್ಟಿದ್ದಾರೆ. ಸದ್ಯದಲ್ಲೇ ಅವರು ಯಾರು, ಏನು ಅಂತ ಹೆಸರು ಬಹಿರಂಗ ಪಡಿಸ್ತೀನಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಯಡಿಯೂರಪ್ಪ ಅವರು ಈಗಾಗಲೇ ಸಿಐಡಿ ಮುಂದೆ ತನಿಖೆಗೆ ಅಟೆಂಡ್ ಆಗ್ತೀನಿ ಅಂದಿದ್ದಾರೆ. ಈಗ ಸಾಕ್ಷ್ಯ ನಾಶ ಮಾಡ್ತಾರೆ ಬಂಧಿಸಬೇಕು ಅಂತಾರೆ, ಮಾಡೋದಿದ್ದರೆ 60 ದಿನಗಳ ಹಿಂದೆ ಸಾಕ್ಷ್ಯ ಮಾಡಬಹುದಿತ್ತಲ್ಲ. ಇದು ದುರುದ್ದೇಶದಿಂದ ದ್ವೇಷದ ರಾಜಕಾರಣ ಮಾಡ್ತಾ ಇದ್ದಾರೆ. ಯಡಿಯೂರಪ್ಪ ಬಂಧಿಸಿದ್ರೆ ಸರ್ಕಾರ ಪತನವಾಗುತ್ತೆ. ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ಅವರು ಮಹಿಳೆ ದೂರು ನೀಡಿದ್ದ ಉಳಿದ 52 ಜನರನ್ನ ಯಾಕೆ ಬಂಧಿಸಲಿಲ್ಲ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಆಗ ಮಾತ್ರ ಬಾಲಕಿ ಹಿಂದೆ ಯಾರ್ಯಾರು ಇದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
POCSO case against BSY, Influential minister behind conspiracy slams Renukacharya in Dawanagere.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm