ಬ್ರೇಕಿಂಗ್ ನ್ಯೂಸ್
14-06-24 07:13 pm HK News Desk ಕರ್ನಾಟಕ
ದಾವಣಗೆರೆ, ಜೂನ್.14: ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ರಾಜಕೀಯ ಪ್ರೇರಿತ ಕೇಸ್ ದಾಖಲಿಸಲಾಗಿದೆ. ಆಕೆ ಮಾನಸಿಕ ಅಸ್ವಸ್ಥೆ, 53 ಜನರ ಮೇಲೆ ಕೇಸ್ ಹಾಕಿದ್ದಾಳೆ ಎಂದು ಗೃಹ ಸಚಿವರೇ ಹೇಳಿದ್ದರು. ಇದೀಗ ಧೀಡಿರ್ ಅಂತ ಕೇಸ್ ಗೆ ಮರುಜೀವ ಬಂದಿದ್ದು ಯಾಕೆ..? ಎಂದು ಪ್ರಶ್ನಿಸಿದ್ದಾರೆ.
ನನ್ನ ಸಹೋದರ ಸಂಬಂಧಿಗಳೇ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ, ನ್ಯಾಯ ಕೊಡಿಸಿ ಅಂತ ಯಡಿಯೂರಪ್ಪ ಮನೆಗೆ ಮಹಿಳೆ ಬಂದಿದ್ದಳು. 5 ಸಾವಿರ ಕೋಟಿ ಬಜಾಜ್ ಕಂಪನಿಯವರು ಕೊಡಬೇಕು, ಕೊಡಿಸಿ ಅಂತಾ ಗೋಗರೆದಿದ್ದಳು. ಅದು ಯಾವ ಅಕೌಂಟ್ ನಿಂದ ಬಂತು, ಯಾವ ಹಣ ಅನ್ನೋದು ತನಿಖೆ ಆಗಬೇಕು. ರಾಹುಲ್ ಗಾಂಧಿ, ಸುರ್ಜೇವಾಲಾ ಕೋರ್ಟ್ ಗೆ ಬಂದು ಹೋದ ಮೇಲೆ ಇದೆಲ್ಲ ಆಗ್ತಾ ಇದೆ.
ವಾಲ್ಮೀಕಿ ನಿಗಮದ ಭ್ರಷ್ಟಾಚಾರದಿಂದ ಶಿವಮೊಗ್ಗದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ್ರು. ಲೊಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 24 ಸ್ಥಾನ ಗೆಲ್ಲುವ ಭರವಸೆ ಇಟ್ಕೊಂಡಿದ್ರು, ಆದರೆ ಆಸೆ ಕೈಗೂಡಲಿಲ್ಲ. ಈ ರೀತಿ ಅಸಹಾಯಕರಾದ ಕೈ ಮುಖಂಡರು ದ್ವೇಷದ ರಾಜಕಾರಣ ಮಾಡ್ತಾ ಇದಾರೆ. ಬಾಲಕಿ ಸಹೋದರ, ತಾಯಿ ಮತ್ತು ಸಹೋದರಿ ಜೊತೆಗೆ ಇರಲಿಲ್ಲ. ಬಾಲಕಿ ಸಹೋದರನನ್ನು ಪ್ರಭಾವಿ ಸಚಿವರು ಕರೆಸಿ ಅವನಿಗೆ ಆಮಿಷ ತೋರಿಸಿ ಸತ್ತು ಹೋದ ಕೇಸಿಗೆ ಜೀವ ಕೊಟ್ಟಿದ್ದಾರೆ. ಸದ್ಯದಲ್ಲೇ ಅವರು ಯಾರು, ಏನು ಅಂತ ಹೆಸರು ಬಹಿರಂಗ ಪಡಿಸ್ತೀನಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಯಡಿಯೂರಪ್ಪ ಅವರು ಈಗಾಗಲೇ ಸಿಐಡಿ ಮುಂದೆ ತನಿಖೆಗೆ ಅಟೆಂಡ್ ಆಗ್ತೀನಿ ಅಂದಿದ್ದಾರೆ. ಈಗ ಸಾಕ್ಷ್ಯ ನಾಶ ಮಾಡ್ತಾರೆ ಬಂಧಿಸಬೇಕು ಅಂತಾರೆ, ಮಾಡೋದಿದ್ದರೆ 60 ದಿನಗಳ ಹಿಂದೆ ಸಾಕ್ಷ್ಯ ಮಾಡಬಹುದಿತ್ತಲ್ಲ. ಇದು ದುರುದ್ದೇಶದಿಂದ ದ್ವೇಷದ ರಾಜಕಾರಣ ಮಾಡ್ತಾ ಇದ್ದಾರೆ. ಯಡಿಯೂರಪ್ಪ ಬಂಧಿಸಿದ್ರೆ ಸರ್ಕಾರ ಪತನವಾಗುತ್ತೆ. ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ಅವರು ಮಹಿಳೆ ದೂರು ನೀಡಿದ್ದ ಉಳಿದ 52 ಜನರನ್ನ ಯಾಕೆ ಬಂಧಿಸಲಿಲ್ಲ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಆಗ ಮಾತ್ರ ಬಾಲಕಿ ಹಿಂದೆ ಯಾರ್ಯಾರು ಇದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
POCSO case against BSY, Influential minister behind conspiracy slams Renukacharya in Dawanagere.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm