ಬ್ರೇಕಿಂಗ್ ನ್ಯೂಸ್
14-06-24 07:13 pm HK News Desk ಕರ್ನಾಟಕ
ದಾವಣಗೆರೆ, ಜೂನ್.14: ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ರಾಜಕೀಯ ಪ್ರೇರಿತ ಕೇಸ್ ದಾಖಲಿಸಲಾಗಿದೆ. ಆಕೆ ಮಾನಸಿಕ ಅಸ್ವಸ್ಥೆ, 53 ಜನರ ಮೇಲೆ ಕೇಸ್ ಹಾಕಿದ್ದಾಳೆ ಎಂದು ಗೃಹ ಸಚಿವರೇ ಹೇಳಿದ್ದರು. ಇದೀಗ ಧೀಡಿರ್ ಅಂತ ಕೇಸ್ ಗೆ ಮರುಜೀವ ಬಂದಿದ್ದು ಯಾಕೆ..? ಎಂದು ಪ್ರಶ್ನಿಸಿದ್ದಾರೆ.
ನನ್ನ ಸಹೋದರ ಸಂಬಂಧಿಗಳೇ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ, ನ್ಯಾಯ ಕೊಡಿಸಿ ಅಂತ ಯಡಿಯೂರಪ್ಪ ಮನೆಗೆ ಮಹಿಳೆ ಬಂದಿದ್ದಳು. 5 ಸಾವಿರ ಕೋಟಿ ಬಜಾಜ್ ಕಂಪನಿಯವರು ಕೊಡಬೇಕು, ಕೊಡಿಸಿ ಅಂತಾ ಗೋಗರೆದಿದ್ದಳು. ಅದು ಯಾವ ಅಕೌಂಟ್ ನಿಂದ ಬಂತು, ಯಾವ ಹಣ ಅನ್ನೋದು ತನಿಖೆ ಆಗಬೇಕು. ರಾಹುಲ್ ಗಾಂಧಿ, ಸುರ್ಜೇವಾಲಾ ಕೋರ್ಟ್ ಗೆ ಬಂದು ಹೋದ ಮೇಲೆ ಇದೆಲ್ಲ ಆಗ್ತಾ ಇದೆ.
ವಾಲ್ಮೀಕಿ ನಿಗಮದ ಭ್ರಷ್ಟಾಚಾರದಿಂದ ಶಿವಮೊಗ್ಗದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ್ರು. ಲೊಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 24 ಸ್ಥಾನ ಗೆಲ್ಲುವ ಭರವಸೆ ಇಟ್ಕೊಂಡಿದ್ರು, ಆದರೆ ಆಸೆ ಕೈಗೂಡಲಿಲ್ಲ. ಈ ರೀತಿ ಅಸಹಾಯಕರಾದ ಕೈ ಮುಖಂಡರು ದ್ವೇಷದ ರಾಜಕಾರಣ ಮಾಡ್ತಾ ಇದಾರೆ. ಬಾಲಕಿ ಸಹೋದರ, ತಾಯಿ ಮತ್ತು ಸಹೋದರಿ ಜೊತೆಗೆ ಇರಲಿಲ್ಲ. ಬಾಲಕಿ ಸಹೋದರನನ್ನು ಪ್ರಭಾವಿ ಸಚಿವರು ಕರೆಸಿ ಅವನಿಗೆ ಆಮಿಷ ತೋರಿಸಿ ಸತ್ತು ಹೋದ ಕೇಸಿಗೆ ಜೀವ ಕೊಟ್ಟಿದ್ದಾರೆ. ಸದ್ಯದಲ್ಲೇ ಅವರು ಯಾರು, ಏನು ಅಂತ ಹೆಸರು ಬಹಿರಂಗ ಪಡಿಸ್ತೀನಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಯಡಿಯೂರಪ್ಪ ಅವರು ಈಗಾಗಲೇ ಸಿಐಡಿ ಮುಂದೆ ತನಿಖೆಗೆ ಅಟೆಂಡ್ ಆಗ್ತೀನಿ ಅಂದಿದ್ದಾರೆ. ಈಗ ಸಾಕ್ಷ್ಯ ನಾಶ ಮಾಡ್ತಾರೆ ಬಂಧಿಸಬೇಕು ಅಂತಾರೆ, ಮಾಡೋದಿದ್ದರೆ 60 ದಿನಗಳ ಹಿಂದೆ ಸಾಕ್ಷ್ಯ ಮಾಡಬಹುದಿತ್ತಲ್ಲ. ಇದು ದುರುದ್ದೇಶದಿಂದ ದ್ವೇಷದ ರಾಜಕಾರಣ ಮಾಡ್ತಾ ಇದ್ದಾರೆ. ಯಡಿಯೂರಪ್ಪ ಬಂಧಿಸಿದ್ರೆ ಸರ್ಕಾರ ಪತನವಾಗುತ್ತೆ. ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ಅವರು ಮಹಿಳೆ ದೂರು ನೀಡಿದ್ದ ಉಳಿದ 52 ಜನರನ್ನ ಯಾಕೆ ಬಂಧಿಸಲಿಲ್ಲ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಆಗ ಮಾತ್ರ ಬಾಲಕಿ ಹಿಂದೆ ಯಾರ್ಯಾರು ಇದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
POCSO case against BSY, Influential minister behind conspiracy slams Renukacharya in Dawanagere.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm