ಬ್ರೇಕಿಂಗ್ ನ್ಯೂಸ್
14-06-24 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸುವುದು ಬೇಡ, ವಿಚಾರಣೆಗೆ ಹಾಜರಾಗಲು ಅವಕಾಶ ಕೊಡಿ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿಗೆ ರಿಲೀಫ್ ಸಿಕ್ಕಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸ್ಥಳೀಯ ಕೋರ್ಟ್ ಬಂಧನ ವಾರೆಂಟ್ ಹೊರಡಿಸಿತ್ತು. ವಿಚಾರಣೆಗೆ ಬರಲು ಹಲವು ನೋಟಿಸ್ ನೀಡಿದರೂ ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್ ಮೊರೆ ಹೋಗಿತ್ತು. ಇದೇ ವೇಳೆ ಹೈಕೋರ್ಟ್ನಲ್ಲಿ ಬಂಧನ ಮಾಡದಂತೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ತುರ್ತಾಗಿ ಬಂಧಿಸುವ ಅಗತ್ಯವಿಲ್ಲ. ವಯಸ್ಸಿನ ಕಾರಣದಿಂದ ಅವರನ್ನು ವಿಚಾರಣೆಗೆ ಬರಲು ಅವಕಾಶ ಕೊಡಿ ಎಂದು ಹೇಳಿದ್ದಲ್ಲದೆ, ಜೂನ್ 17ಕ್ಕೆ ತಪ್ಪದೆ ತನಿಖೆಗೆ ಹಾಜರು ಪಡಿಸುವಂತೆ ವಕೀಲರಿಗೆ ಸೂಚನೆ ನೀಡಿದೆ.
ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು ಆರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಸದ್ಯಕ್ಕೆ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಮಹಿಳೆ ನೀಡಿರುವ ದೂರಿನ ಬಗ್ಗೆ ಆಕ್ಷೇಪ ಎತ್ತಿದ ವಕೀಲರು, ಆಕೆಯ ದೂರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಗೃಹ ಸಚಿವರೇ ಹೇಳಿದ್ದರು. 50ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ನೀಡಿದ್ದರು. ಮಾಜಿ ಮುಖ್ಯಮಂತ್ರಿ ಮೇಲೆ ಅಂಥದ್ದೇ ಆರೋಪ ಮಾಡಿದ್ದಾರೆ. ಪುರಾವೆ ಇಲ್ಲದೆ ದೂರು ಕೊಟ್ಟ ಮಾತ್ರಕ್ಕೆ ಬಂಧಿಸುವ ಅಗತ್ಯ ಇಲ್ಲ ಎಂದು ವಾದ ಮಂಡಿಸಿದ್ದರು.
Former Karnataka chief minister and senior BJP leader B.S. Yediyurappa, who is facing arrest in connection with a Pocso case, got temporary relief on Friday as the High Court directed the police not to initiate arrest procedures against him. The bench, headed by Justice Krishna S. Dixit, also directed Yediyurappa to appear before the court on Monday (June 17) without fail, as he had mentioned in his reply to the police.
25-02-26 01:48 pm
Supritha Jain | ಸುಪ್ರೀತಾ ಜೈನ್
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm