ಬ್ರೇಕಿಂಗ್ ನ್ಯೂಸ್
15-06-24 08:29 pm HK News Desk ಕರ್ನಾಟಕ
ಕಾರವಾರ, ಜೂ 15: ಪೊಲೀಸರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ರಾಮನಗರ ಪೊಲೀಸ್ ಠಾಣೆಯ ಎದುರಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಭಾಸ್ಕರ ಬೋಂಡೇಲ್ಕರ (30) ಆತ್ಮಹತ್ಯೆಗೆ ಶರಣಾದ ಯುವಕ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪಿಎಸ್ಐ ಬಸವರಾಜ ಕಿರುಕಳಕ್ಕೆ ಬೇಸತ್ತು ಭಾಸ್ಕರ್ ರಾಮನಗರ ಬಿಟ್ಟು ಜೋಯಿಡಾದಲ್ಲಿ ಕೆಲಸಕ್ಕೆ ಸೇರಿದ್ದರು.
ಕೆಲ ದಿನಗಳ ಹಿಂದೆ ಜಮೀನು ವಿಚಾರದಲ್ಲಿ ಪೊಲೀಸರು ಭಾಸ್ಕರ ಅವರ ಮಾವ ಗಣಪತಿಗೆ ಅವರಿಗೆ ನೋಟಿಸ್ ಕೊಟ್ಟಿದ್ದರು. ಇದನ್ನು ತಿಳಿದ ಭಾಸ್ಕರ್, ನನಗೆ ಪೀಡುಸುತ್ತಿದ್ದ ಪೊಲೀಸರು ಈಗ ನನ್ನ ಮಾವನಿಗೂ ಪೀಡಿಸುತ್ತುದ್ದಾರೆಂದು ಭಾವಿಸಿ ಜೂನ್ 13 ರಂದು ಮಧ್ಯಪಾನ ಮಾಡಿ ಠಾಣೆಗೆ ಹೋಗಿ ನೋಟಿಸ್ ಕೊಟ್ಟಿರುವುದಕ್ಕೆ ಪ್ರಶ್ನಿಸಿದ್ದರೆ. ಈ ವೇಳೆ ಪೊಲೀಸರು ಸರಿಯಾಗಿ ಸ್ಪಂದಿಸದೆ ಭಾಸ್ಕರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಭಾಸ್ಕರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಬೆಂಕಿ ಹಂಚಿಕೊಂಡಿದನ್ನು ಕಂಡ ಪೊಲೀಸರು ಕೂಡಲೆ ಬೆಂಕಿ ನಂದಿಸಿದರು. ಅರ್ಧ ದೇಹ ಸುಟ್ಟು, ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಭಾಸ್ಕರ ಮೃತಪಟ್ಟಿದ್ದಾರೆ.
Alleging that the police were harassing him, a youth committed suicide by pouring petrol on himself and setting himself on fire in front of Ramanagara police station.Bhaskar Bondelkar (30) is a young man who committed suicide.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm