ಬ್ರೇಕಿಂಗ್ ನ್ಯೂಸ್
16-06-24 02:42 pm Bengaluru Correspondent ಕರ್ನಾಟಕ
Photo credits : NEWS FIRST
ಬೆಂಗಳೂರು, ಜೂ 16: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಮನೆಯಲ್ಲಿ ಇಂದು ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾ ಗೌಡ ನೇರವಾಗಿ ತಮ್ಮ ಮನೆಗೆ ಹೋಗಿದ್ದರು. ಅಲ್ಲದೇ ರೇಣುಕಾಸ್ವಾಮಿಯ ಮೇಲೆ ಮೊದಲು ಹಲ್ಲೆ ಮಾಡಿದ್ದೇ ಪವಿತ್ರಾ ಗೌಡ ಎಂಬ ಮಾಹಿತಿಯೂ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ.
ಆರ್.ಆರ್.ನಗರದಲ್ಲಿರುವ ಪವಿತ್ರಾ ಗೌಡ ಮನೆಗೆ ಆಕೆ ಮತ್ತು ಅವರ ಆಪ್ತ ಪವನ್ ಎಂಬವರನ್ನು ಕರೆದೊಯ್ಯಲಾಗಿದ್ದು, ಕೃತ್ಯದ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ಹಲ್ಲೆ ಮಾಡಲು ಬಳಸಿದ್ದ ಚಪ್ಪಲಿಯನ್ನ ಜಪ್ತಿ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬನನ್ನು ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ಅಂದರೆ ರೇಣುಕಾಸ್ವಾಮಿ ಕೊಲೆಯಾದ ಶೆಡ್ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್ನನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.

ಮಮ್ಮಿಯನ್ನ ನೋಡಲು ಬಂದ ಮಗಳು ;
ಪವಿತ್ರ ಗೌಡ ಸದ್ಯ ಪೊಲೀಸ್ ಕಷ್ಟಡಿಯಲ್ಲಿದ್ದಾಳೆ. ಪೊಲೀಸರ ವಶದಲ್ಲಿರುವ ತಾಯಿಯನ್ನ ನೋಡಲು ಬೆಳಿಗ್ಗೆ ಮಗಳು ಬಂದಿದ್ದಾಳೆ. ಮಗಳನ್ನು ಕಂಡ ಪವಿತ್ರಾ ಗೌಡ ಭಾವುಕಳಾಗಿದ್ದಾರೆ.
ನಿನ್ನೆ ತಾಯಿಯನ್ನ ಭೇಟಿಯಾಗಳು ಮಗಳು ಖುಷಿ ಪೊಲೀಸ್ ಠಾಣೆಗೆ ಓಡೋಡಿ ಬಂದಳು. ಅಜ್ಜಿಯ ಜೊತೆಗೆ ಠಾಣೆಗೆ ಬಂದಿದ್ದಳು. ಆ ವೇಳೆ ತಾಯಿಯ ಪರಿಸ್ಥಿತಿ ಕಂಡು ಮಗಳು ಖುಷಿ ಮರುಕಪಟ್ಟಿದ್ದಾಳೆ.
Darshan murder case, police search Pavithra Gowda house in Bangalore, seize dress and sandals. Police are checking the CCTV footages to check the timings of Pavithra entering the house on the day of murder.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm