ಬ್ರೇಕಿಂಗ್ ನ್ಯೂಸ್
17-06-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.17: ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಬೇಕೆಂದು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸುಮಾರು ಆರು ವರ್ಷಗಳ ಬಳಿಕ ಮತ್ತೆ ಜಾಗತಿಕ ಲಿಂಗಾಯತ ಮಹಾಸಭಾವು ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾಮದಾರ್, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಅಗತ್ಯದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮಹಾಸಭಾ ಸರ್ವ ಪ್ರಯತ್ನ ನಡೆಸಲಿದೆ. ಈ ಬಗ್ಗೆ ಒಂದು ತಿಂಗಳಲ್ಲಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದಿದ್ದಾರೆ.
ದಲಿತರು ಮತ್ತು ಬುಡಕಟ್ಟುಗಳ ಒಂದು ವಿಭಾಗವು ಲಿಂಗಾಯತ ಸಮುದಾಯದ ಅಡಿಯಲ್ಲಿ ಬರುತ್ತದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ, ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರವು ತಿರಸ್ಕರಿಸಿತ್ತು. ಈಗ ಅನೇಕ ದಲಿತರು ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಆದರೆ, ಅವರಿನ್ನೂ ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಕೇಂದ್ರ ನೀಡಿರುವ ಕಾರಣ ತಪ್ಪು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಾಮದಾರ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲ ವೀರಶೈವರು ಲಿಂಗಾಯತರು. ಆದರೆ, ಎಲ್ಲ ಲಿಂಗಾಯತರು ವೀರಶೈವರಲ್ಲ. ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದ್ದು ಸುಮಾರು ಐದಾರು ವರ್ಷಗಳ ಹಿಂದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ನಮ್ಮ ಹೋರಾಟವು ಈ ಸಮಸ್ಯೆಗೆ ತಾರ್ಕಿಕ ತೀರ್ಮಾನ ಸಿಗುವವರೆಗೂ ಮುಂದುವರಿಯುತ್ತದೆ. ಜಿಲ್ಲಾ ಘಟಕಗಳಿಗೆ ಚುನಾವಣೆ ನಡೆಸುವ ಮೂಲಕ ಮಹಾಸಭಾವನ್ನು ಪುನರ್ ಸಂಘಟಿಸಿ ಬಲಪಡಿಸುತ್ತೇವೆ ಎಂದು ಜಾಮದಾರ್ ಹೇಳಿದ್ದಾರೆ.
Nearly six years after the Union government rejected the Siddaramaiah-led Congress government’s proposal to accord separate religion status for Lingayats, the Jagatika Lingayat Mahasabha has decided to push for the tag.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm