ಬ್ರೇಕಿಂಗ್ ನ್ಯೂಸ್
17-06-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.17: ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಬೇಕೆಂದು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸುಮಾರು ಆರು ವರ್ಷಗಳ ಬಳಿಕ ಮತ್ತೆ ಜಾಗತಿಕ ಲಿಂಗಾಯತ ಮಹಾಸಭಾವು ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾಮದಾರ್, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಅಗತ್ಯದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮಹಾಸಭಾ ಸರ್ವ ಪ್ರಯತ್ನ ನಡೆಸಲಿದೆ. ಈ ಬಗ್ಗೆ ಒಂದು ತಿಂಗಳಲ್ಲಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದಿದ್ದಾರೆ.
ದಲಿತರು ಮತ್ತು ಬುಡಕಟ್ಟುಗಳ ಒಂದು ವಿಭಾಗವು ಲಿಂಗಾಯತ ಸಮುದಾಯದ ಅಡಿಯಲ್ಲಿ ಬರುತ್ತದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ, ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರವು ತಿರಸ್ಕರಿಸಿತ್ತು. ಈಗ ಅನೇಕ ದಲಿತರು ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಆದರೆ, ಅವರಿನ್ನೂ ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಕೇಂದ್ರ ನೀಡಿರುವ ಕಾರಣ ತಪ್ಪು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಾಮದಾರ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲ ವೀರಶೈವರು ಲಿಂಗಾಯತರು. ಆದರೆ, ಎಲ್ಲ ಲಿಂಗಾಯತರು ವೀರಶೈವರಲ್ಲ. ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದ್ದು ಸುಮಾರು ಐದಾರು ವರ್ಷಗಳ ಹಿಂದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ನಮ್ಮ ಹೋರಾಟವು ಈ ಸಮಸ್ಯೆಗೆ ತಾರ್ಕಿಕ ತೀರ್ಮಾನ ಸಿಗುವವರೆಗೂ ಮುಂದುವರಿಯುತ್ತದೆ. ಜಿಲ್ಲಾ ಘಟಕಗಳಿಗೆ ಚುನಾವಣೆ ನಡೆಸುವ ಮೂಲಕ ಮಹಾಸಭಾವನ್ನು ಪುನರ್ ಸಂಘಟಿಸಿ ಬಲಪಡಿಸುತ್ತೇವೆ ಎಂದು ಜಾಮದಾರ್ ಹೇಳಿದ್ದಾರೆ.
Nearly six years after the Union government rejected the Siddaramaiah-led Congress government’s proposal to accord separate religion status for Lingayats, the Jagatika Lingayat Mahasabha has decided to push for the tag.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm