ಬ್ರೇಕಿಂಗ್ ನ್ಯೂಸ್
18-06-24 05:43 pm HK News Desk ಕರ್ನಾಟಕ
ಕಾರವಾರ, ಜೂನ್ 18: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನನ್ನು ಎನ್ಐಎ ಅಧಿಕಾರಿಗಳು ಶಿರಸಿಯಲ್ಲಿ ಬಂಧಿಸಿದ್ದಾರೆ. ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್ಐಎ ತಂಡ ದಾಳಿ ನಡೆಸಿ ಯುವಕನನ್ನು ಬಂಧಿಸಿದೆ.
ಅಬ್ದುಲ್ ಶಕೂರ್(32) ಬಂಧಿತ ಯುವಕ. ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಕೆಲ ದಿನಗಳ ಹಿಂದಷ್ಟೇ ಬಕ್ರೀದ್ ಆಚರಣೆಗಾಗಿ ದಾಸನಕೊಪ್ಪಕ್ಕೆ ಬಂದಿದ್ದ. ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸರ ಸಹಕಾರದಿಂದ ಯುವಕನನ್ನು ಎನ್ಎಐ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಯುವಕ ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಆಗಿದ್ದು, ಸಂಘಟನೆ ನಿಷೇಧ ಬಳಿಕ ದುಬೈನಲ್ಲಿ ಕೆಲಸ ಮಾಡುತ್ತಿದ್ದ. ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ, ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರೆ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ ಈತನ ಮೇಲಿದೆ.
ಆನ್ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಪಾಸ್ಪೋರ್ಟ್ ನಕಲಿ ದಾಖಲೆ ನೀಡಿದ ಆರೋಪವೂ ಈತನ ಮೇಲಿದೆ, ಸದ್ಯ ಆರೋಪಿಗೆ ನೋಟೀಸ್ ನೀಡಿ ಗುಪ್ತ ಸ್ಥಳದಲ್ಲಿ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
NIA arrests one from sirsi in Karwar over links with terror. The arrested has been identified as Abdul Shakur. NIA officials have arrested a young man in Shirsi on charges of being in contact with a terrorist organization and posting provocative posts on social media. Shirsi taluk was accused of posting a post to create communal hatred
25-02-26 12:30 pm
HK News Staffer
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm