ಬ್ರೇಕಿಂಗ್ ನ್ಯೂಸ್
18-06-24 06:32 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.18: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ACMM ವಿಶೇಷ ನ್ಯಾಯಾಲಯ ಜೂನ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೂನ್ 12 ರಂದು ಆತನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಜೂನ್ 18 ರವರೆಗೆ ಅವರನ್ನು ವಶಕ್ಕೆ ನೀಡಿತ್ತು. 33 ವರ್ಷದ ಪ್ರಜ್ವಲ್ ರೇವಣ್ಣ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು.
ಪುರುಷತ್ವ ಪರೀಕ್ಷೆ ತುಂಬಾ ಮುಜುಗರ ಆಗತ್ತೆ ಪ್ಲೀಸ್ ಬೇಡ !
ಈ ವೇಳೆ ಮತ್ತೊಮ್ಮೆ ಪುರುಷತ್ವ ಪರೀಕ್ಷೆಗೆ ಮನವಿ ಮಾಡಿರುವುದ್ದಕ್ಕೆ ಪ್ರಜ್ವಲ್ ರೇವಣ್ಣ ನ್ಯಾಯಾಲಯದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. "ನಾನು ಎರಡು ಪ್ರಕರಣದಲ್ಲಿ ಒಪ್ಪಿಕೊಂಡು ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಪುರುಷತ್ವ ಪರೀಕ್ಷೆ ತುಂಬಾ ಮುಜುಗರ ಆಗುತ್ತೆ. ಈಗಾಗಲೇ ಎರಡು ಕೇಸ್ನಲ್ಲಿ ಪುರುಷತ್ವ ಪರೀಕ್ಷೆ ಆಗಿದೆ ಎಂದು ನ್ಯಾಯಾಧೀಶರ ಮುಂದೆ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದನ್ನು ಕೇಳಿ ನ್ಯಾಯಾಧೀಶರು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಇನ್ನು, ಸಿಐಡಿಯಲ್ಲಿ ದಾಖಲಾಗಿರುವ ಮತ್ತೊಂದು ಪ್ರಕರಣದಲ್ಲಿ ಎಸ್ಐಟಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವನ್ನು ಕಸ್ಟಡಿಗೆ ಪಡೆಯಲು ಚಿಂತಿಸುತ್ತಿದೆ. ಇತ್ತೀಚೆಗೆ 3 ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಎಸ್ಐಟಿ ಮತ್ತೆ ಪ್ರಜ್ವಲ್ ರೇವಣ್ಣರನ್ನು ತಮ್ಮ ವಶಕ್ಕೆ ಪಡೆದಿತ್ತು.
ಮೇ 31 ರಂದು ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಹಾಸನ ಚುನಾವಣೆ ನಡೆದ ಒಂದು ದಿನದ ನಂತರ ಅವರು ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದರು. ಕೇಂದ್ರೀಯ ತನಿಖಾ ದಳದ ಮೂಲಕ ಎಸ್ಐಟಿ ಕೋರಿಕೆಯ ಮೇರೆಗೆ ಇಂಟರ್ಪೋಲ್ನಿಂದ ಈ ಹಿಂದೆ ಆತನ ಇರುವಿಕೆಯ ಬಗ್ಗೆ ಮಾಹಿತಿ ಕೋರಿ 'ಬ್ಲೂ ಕಾರ್ನರ್ ನೋಟಿಸ್' ನೀಡಲಾಗಿತ್ತು.
The Bengaluru court on Tuesday extended judicial custody of sexual assault and rape accused suspended JDS leader Prajwal Revanna. The 42nd Additional Chief Metropolitan Magistrate (ACMM) special court for representatives pronounces the extension of his judicial custody.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am