ಬ್ರೇಕಿಂಗ್ ನ್ಯೂಸ್
22-06-24 03:27 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರಾಗಲು ನಟ ದರ್ಶನ್ ಹಣದ ಹೊಳೆ ಹರಿಸಿದ್ದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ, 40 ಲಕ್ಷ ರೂ.ನಷ್ಟು ಹಣ ಸಾಲ ನೀಡಿದ್ದು ಬಿಜೆಪಿ ಶಾಸಕರೊಬ್ಬರ ಪರಮಾಪ್ತ ರಾಮ್ ಮೋಹನ್ ರಾಜ್ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಇದರ ಬೆನ್ನಲ್ಲೇ ಹಣ ಕೊಟ್ಟಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮೇಯರ್ ರಾಮ್ ಮೋಹನ್ರಾಜ್ ಅವರನ್ನು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಕೊಲೆ ಪ್ರಕರಣದ ಆರೋಪಿ ದರ್ಶನ್ ವಿಚಾರಣೆ ವೇಳೆ, ಕೇಸ್ನಿಂದ ಬಚಾವಾಗಲು ಮೋಹನ್ ರಾಜ್ ಅವರಿಂದ 40 ಲಕ್ಷ ರೂ. ಸಾಲ ಪಡೆದು ಮನೆಯಲ್ಲಿಟ್ಟಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹಣವನ್ನೂ ಈಗಾಗಲೇ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ದರ್ಶನ್ಗೆ ಹಣ ಕೊಟ್ಟಿದ್ದು ನಿಜವೇ? ಯಾವ ಉದ್ದೇಶಕ್ಕಾಗಿ ಸಾಲ ನೀಡಲಾಗಿತ್ತು. ಆರೋಪಿ ಕೃತ್ಯದ ಬಗ್ಗೆ ಏನಾದರೂ ಚರ್ಚೆ ನಡೆಸಿದ್ದರೇ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ತಿಳಿಯಲು ಪೊಲೀಸರು ಮೋಹನ್ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಶುಕ್ರವಾರ ನೋಟಿಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ಬಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
ಆರೋಪಿ ನಟ ದರ್ಶನ್, ವಿನಯ್ ಸೇರಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ದರ್ಶನ್ ಬಳಿ ಜಪ್ತಿ ಮಾಡಲಾಗಿರುವ ಹಣದ ಮೂಲ ಹಾಗೂ ಕೃತ್ಯದ ಬಗ್ಗೆ ಹಲವರನ್ನು ಸಂಪರ್ಕಿಸಿದ್ದ ಕುರಿತೂ ಸರಣಿ ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿದ್ದಾರೆ. ಸಾಕ್ಷ್ಯ ನಾಶದ ಆರೋಪ ಹೊತ್ತಿರುವ ಪ್ರದೋಶ್, ಕರೆಂಟ್ ಶಾಕ್ ನೀಡಿರುವ ಧನರಾಜ್ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ನೂ ಹಲವರ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಶನಿವಾರ ಮುಕ್ತಾಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ದರ್ಶನ್ ಸೇರಿ ನಾಲ್ವರು ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
In a major development in the ongoing investigation of the Renukaswamy murder case, Kannada actor Darshan Thoogudeepa has admitted to borrowing ₹40 lakh from one of his friends to pay for the destruction of evidence.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm