ಬ್ರೇಕಿಂಗ್ ನ್ಯೂಸ್
22-06-24 03:27 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರಾಗಲು ನಟ ದರ್ಶನ್ ಹಣದ ಹೊಳೆ ಹರಿಸಿದ್ದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ, 40 ಲಕ್ಷ ರೂ.ನಷ್ಟು ಹಣ ಸಾಲ ನೀಡಿದ್ದು ಬಿಜೆಪಿ ಶಾಸಕರೊಬ್ಬರ ಪರಮಾಪ್ತ ರಾಮ್ ಮೋಹನ್ ರಾಜ್ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಇದರ ಬೆನ್ನಲ್ಲೇ ಹಣ ಕೊಟ್ಟಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮೇಯರ್ ರಾಮ್ ಮೋಹನ್ರಾಜ್ ಅವರನ್ನು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಕೊಲೆ ಪ್ರಕರಣದ ಆರೋಪಿ ದರ್ಶನ್ ವಿಚಾರಣೆ ವೇಳೆ, ಕೇಸ್ನಿಂದ ಬಚಾವಾಗಲು ಮೋಹನ್ ರಾಜ್ ಅವರಿಂದ 40 ಲಕ್ಷ ರೂ. ಸಾಲ ಪಡೆದು ಮನೆಯಲ್ಲಿಟ್ಟಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹಣವನ್ನೂ ಈಗಾಗಲೇ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ದರ್ಶನ್ಗೆ ಹಣ ಕೊಟ್ಟಿದ್ದು ನಿಜವೇ? ಯಾವ ಉದ್ದೇಶಕ್ಕಾಗಿ ಸಾಲ ನೀಡಲಾಗಿತ್ತು. ಆರೋಪಿ ಕೃತ್ಯದ ಬಗ್ಗೆ ಏನಾದರೂ ಚರ್ಚೆ ನಡೆಸಿದ್ದರೇ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ತಿಳಿಯಲು ಪೊಲೀಸರು ಮೋಹನ್ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಶುಕ್ರವಾರ ನೋಟಿಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ಬಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
ಆರೋಪಿ ನಟ ದರ್ಶನ್, ವಿನಯ್ ಸೇರಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ದರ್ಶನ್ ಬಳಿ ಜಪ್ತಿ ಮಾಡಲಾಗಿರುವ ಹಣದ ಮೂಲ ಹಾಗೂ ಕೃತ್ಯದ ಬಗ್ಗೆ ಹಲವರನ್ನು ಸಂಪರ್ಕಿಸಿದ್ದ ಕುರಿತೂ ಸರಣಿ ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿದ್ದಾರೆ. ಸಾಕ್ಷ್ಯ ನಾಶದ ಆರೋಪ ಹೊತ್ತಿರುವ ಪ್ರದೋಶ್, ಕರೆಂಟ್ ಶಾಕ್ ನೀಡಿರುವ ಧನರಾಜ್ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ನೂ ಹಲವರ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಶನಿವಾರ ಮುಕ್ತಾಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ದರ್ಶನ್ ಸೇರಿ ನಾಲ್ವರು ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
In a major development in the ongoing investigation of the Renukaswamy murder case, Kannada actor Darshan Thoogudeepa has admitted to borrowing ₹40 lakh from one of his friends to pay for the destruction of evidence.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm