ಬ್ರೇಕಿಂಗ್ ನ್ಯೂಸ್
22-06-24 03:27 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರಾಗಲು ನಟ ದರ್ಶನ್ ಹಣದ ಹೊಳೆ ಹರಿಸಿದ್ದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ, 40 ಲಕ್ಷ ರೂ.ನಷ್ಟು ಹಣ ಸಾಲ ನೀಡಿದ್ದು ಬಿಜೆಪಿ ಶಾಸಕರೊಬ್ಬರ ಪರಮಾಪ್ತ ರಾಮ್ ಮೋಹನ್ ರಾಜ್ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಇದರ ಬೆನ್ನಲ್ಲೇ ಹಣ ಕೊಟ್ಟಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮೇಯರ್ ರಾಮ್ ಮೋಹನ್ರಾಜ್ ಅವರನ್ನು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಕೊಲೆ ಪ್ರಕರಣದ ಆರೋಪಿ ದರ್ಶನ್ ವಿಚಾರಣೆ ವೇಳೆ, ಕೇಸ್ನಿಂದ ಬಚಾವಾಗಲು ಮೋಹನ್ ರಾಜ್ ಅವರಿಂದ 40 ಲಕ್ಷ ರೂ. ಸಾಲ ಪಡೆದು ಮನೆಯಲ್ಲಿಟ್ಟಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹಣವನ್ನೂ ಈಗಾಗಲೇ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ದರ್ಶನ್ಗೆ ಹಣ ಕೊಟ್ಟಿದ್ದು ನಿಜವೇ? ಯಾವ ಉದ್ದೇಶಕ್ಕಾಗಿ ಸಾಲ ನೀಡಲಾಗಿತ್ತು. ಆರೋಪಿ ಕೃತ್ಯದ ಬಗ್ಗೆ ಏನಾದರೂ ಚರ್ಚೆ ನಡೆಸಿದ್ದರೇ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ತಿಳಿಯಲು ಪೊಲೀಸರು ಮೋಹನ್ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಶುಕ್ರವಾರ ನೋಟಿಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ಬಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
ಆರೋಪಿ ನಟ ದರ್ಶನ್, ವಿನಯ್ ಸೇರಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ದರ್ಶನ್ ಬಳಿ ಜಪ್ತಿ ಮಾಡಲಾಗಿರುವ ಹಣದ ಮೂಲ ಹಾಗೂ ಕೃತ್ಯದ ಬಗ್ಗೆ ಹಲವರನ್ನು ಸಂಪರ್ಕಿಸಿದ್ದ ಕುರಿತೂ ಸರಣಿ ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿದ್ದಾರೆ. ಸಾಕ್ಷ್ಯ ನಾಶದ ಆರೋಪ ಹೊತ್ತಿರುವ ಪ್ರದೋಶ್, ಕರೆಂಟ್ ಶಾಕ್ ನೀಡಿರುವ ಧನರಾಜ್ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ನೂ ಹಲವರ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಶನಿವಾರ ಮುಕ್ತಾಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ದರ್ಶನ್ ಸೇರಿ ನಾಲ್ವರು ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
In a major development in the ongoing investigation of the Renukaswamy murder case, Kannada actor Darshan Thoogudeepa has admitted to borrowing ₹40 lakh from one of his friends to pay for the destruction of evidence.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm