ಬ್ರೇಕಿಂಗ್ ನ್ಯೂಸ್
22-06-24 03:27 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರಾಗಲು ನಟ ದರ್ಶನ್ ಹಣದ ಹೊಳೆ ಹರಿಸಿದ್ದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ, 40 ಲಕ್ಷ ರೂ.ನಷ್ಟು ಹಣ ಸಾಲ ನೀಡಿದ್ದು ಬಿಜೆಪಿ ಶಾಸಕರೊಬ್ಬರ ಪರಮಾಪ್ತ ರಾಮ್ ಮೋಹನ್ ರಾಜ್ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಇದರ ಬೆನ್ನಲ್ಲೇ ಹಣ ಕೊಟ್ಟಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮೇಯರ್ ರಾಮ್ ಮೋಹನ್ರಾಜ್ ಅವರನ್ನು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಕೊಲೆ ಪ್ರಕರಣದ ಆರೋಪಿ ದರ್ಶನ್ ವಿಚಾರಣೆ ವೇಳೆ, ಕೇಸ್ನಿಂದ ಬಚಾವಾಗಲು ಮೋಹನ್ ರಾಜ್ ಅವರಿಂದ 40 ಲಕ್ಷ ರೂ. ಸಾಲ ಪಡೆದು ಮನೆಯಲ್ಲಿಟ್ಟಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹಣವನ್ನೂ ಈಗಾಗಲೇ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ದರ್ಶನ್ಗೆ ಹಣ ಕೊಟ್ಟಿದ್ದು ನಿಜವೇ? ಯಾವ ಉದ್ದೇಶಕ್ಕಾಗಿ ಸಾಲ ನೀಡಲಾಗಿತ್ತು. ಆರೋಪಿ ಕೃತ್ಯದ ಬಗ್ಗೆ ಏನಾದರೂ ಚರ್ಚೆ ನಡೆಸಿದ್ದರೇ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ತಿಳಿಯಲು ಪೊಲೀಸರು ಮೋಹನ್ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಶುಕ್ರವಾರ ನೋಟಿಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ಬಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
ಆರೋಪಿ ನಟ ದರ್ಶನ್, ವಿನಯ್ ಸೇರಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ದರ್ಶನ್ ಬಳಿ ಜಪ್ತಿ ಮಾಡಲಾಗಿರುವ ಹಣದ ಮೂಲ ಹಾಗೂ ಕೃತ್ಯದ ಬಗ್ಗೆ ಹಲವರನ್ನು ಸಂಪರ್ಕಿಸಿದ್ದ ಕುರಿತೂ ಸರಣಿ ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿದ್ದಾರೆ. ಸಾಕ್ಷ್ಯ ನಾಶದ ಆರೋಪ ಹೊತ್ತಿರುವ ಪ್ರದೋಶ್, ಕರೆಂಟ್ ಶಾಕ್ ನೀಡಿರುವ ಧನರಾಜ್ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ನೂ ಹಲವರ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಶನಿವಾರ ಮುಕ್ತಾಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ದರ್ಶನ್ ಸೇರಿ ನಾಲ್ವರು ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
In a major development in the ongoing investigation of the Renukaswamy murder case, Kannada actor Darshan Thoogudeepa has admitted to borrowing ₹40 lakh from one of his friends to pay for the destruction of evidence.
25-02-26 12:30 pm
HK News Staffer
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm