ಬ್ರೇಕಿಂಗ್ ನ್ಯೂಸ್
22-06-24 04:43 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡಿ-ಬಾಸ್ ಗ್ಯಾಂಗ್ ಲೀಡರ್ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನ ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರುಪಡಿಸಿದ್ರು. ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಆರೋಪಿಗಳಾದ ದರ್ಶನ್, ಧನರಾಜ್, ವಿನಯ್, ಪ್ರದೋಶ್ರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
12 ದಿನಗಳ ಕಾಲ ಕಸ್ಟಡಿ ಪಡೆದು ವಿಚಾರಣೆ ನಡೆಸಿದ ಪೊಲೀಸರು ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದ್ರು. ಮತ್ತೆ ಕಸ್ಟಡಿ ಅಗತ್ಯವಿಲ್ಲ ಎಂದು ಕೋರ್ಟ್ಗೆ ಪೊಲೀಸರು ವರದಿ ನೀಡಿದ್ದಾರೆ. ಹೀಗಾಗಿ ನ್ಯಾಯಾಧೀಶರು ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ನ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳು ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಅವರಿಗೂ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಸೊ- ಕಾಲ್ಡ್ ಗೆಳತಿ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳನ್ನು ಜೂನ್ 11 ರಂದು ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದು, ಇತರೆ ಕೆಲವು ಆರೋಪಿಗಳನ್ನು ನಂತರದ ದಿನಗಳಲ್ಲಿ ಬಂಧಿಸಲಾಗಿದೆ. ಕೆಲವು ಆರೋಪಿಗಳು ತಾವೇ ಪೊಲೀಸರ ಮುಂದೆ ಬಂದು ಸರೆಂಡರ್ ಆಗಿದ್ರು
ಕೋರ್ಟ್ನಲ್ಲಿ ಜಡ್ಜ್ ನಿಮಗೆ ಕಸ್ಟಡಿಯಲ್ಲಿ ಏನಾದ್ರೂ ತೊಂದರೆ ಆಯ್ತಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ದರ್ಶನ್ ಅವರು ಇಲ್ಲ ಸ್ವಾಮಿ ಯಾವುದೇ ತೊಂದರೆ ಆಗಿಲ್ಲ ಎಂದರು.
ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿದ್ರಾ. ನಿಮಗೆ ಏನಾದ್ರೂ ಮೆಡಿಕಲ್ ಟ್ರೀಟ್ಮೆಂಟ್ ಅವಶ್ಯಕತೆ ಇದೆಯಾ ಎಂದು ನ್ಯಾಯಾಧೀಶರು ಕೇಳಿದಕ್ಕೆ ಹೌದು ಬೆಳಗ್ಗೆ ಸ್ಟೇಷನ್ನಲ್ಲಿ ಮಾಡಿಸಿದ್ರು. ಬೇರೆ ಟ್ರೀಟ್ಮೆಂಟ್ ಅವಶ್ಯಕತೆ ಇಲ್ಲ ಸ್ವಾಮಿ ಎಂದ ದರ್ಶನ್ ಹೇಳಿದ್ದಾರೆ.
ಇಂದು ನಟ ದರ್ಶನ್ ಅವರು ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿದ್ದ ಕೇಸ್ನಲ್ಲಿ ದರ್ಶನ್ ಜೈಲು ಪಾಲಾಗಿದ್ದರು. ಇಂದು ಕೋರ್ಟ್ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ 2ನೇ ಬಾರಿ ಸೆಂಟ್ರಲ್ ಜೈಲು ಸೇರಿಕೊಳ್ಳಲಿದ್ದಾರೆ.
Kannada actor Darshan Thoogudeepa and four others have been remanded by a Bengaluru Court to judicial custody until July 4 (Thursday) as part of the ongoing investigation into the Renuka Swamy murder case. They will be held as undertrial prisoners at Parappana Agrahara Central Jail.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm