ಬ್ರೇಕಿಂಗ್ ನ್ಯೂಸ್
23-06-24 07:38 pm HK News Desk ಕರ್ನಾಟಕ
ತುಮಕೂರು, ಜೂನ್ 23: ಪದವಿ ಓದುತ್ತಿದ್ದ 20 ವರ್ಷದ ವಿದ್ಯಾರ್ಥಿನಿ ಮತ್ತು 40 ವರ್ಷದ ವಿವಾಹಿತ ಪುರುಷ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಭಾನುವಾರ ಬೆಳಗ್ಗೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಮ್ಮ ಪ್ರೀತಿಗೆ ಮನೆಯವರು ಒಪ್ಪಿಗೆ ನೀಡಿಲ್ಲವೆಂದು ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇವರಿಬ್ಬರ ಶವಗಳು ಪತ್ತೆಯಾಗಿವೆ. ಅನನ್ಯ (19) ಹಾಗೂ ರಂಗಶಾಮಣ್ಣ (40) ಮೃತರೆಂದು ತಿಳಿದುಬಂದಿದೆ. ಅನನ್ಯಾ ಕೊರಟಗೆರೆ ತಾಲೂಕಿನ ಲಕ್ಕಯ್ಯನಪಾಳ್ಯ ಗ್ರಾಮದವಳಾಗಿದ್ದು, ತುಮಕೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಳು. ಪಕ್ಕದ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ ವಿವಾಹಿತ ವ್ಯಕ್ತಿಯಾಗಿದ್ದು, ಈತನಿಗೆ ಮಡದಿ ಮತ್ತು ಮಕ್ಕಳಿದ್ದಾರೆ. ಆದರೆ, ಮಗಳ ವಯಸ್ಸಿನ ಯುವತಿಯನ್ನು ಪ್ರೀತಿಸಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


ಅಕ್ಕಪಕ್ಕದ ಗ್ರಾಮಸ್ಥರಾದ ಇಬ್ಬರೂ ನಾಪತ್ತೆಯಾಗಿ ಮೂರು ದಿನಗಳಾದರೂ ಪತ್ತೆ ಆಗಿರಲಿಲ್ಲ. ಮೊಬೈಲ್ ಟ್ರೇಸ್ ಮಾಡಿದಾಗ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ ಟ್ರೇಸ್ ಆಗಿತ್ತು. ಕೆರೆಯ ಬಳಿ ನಿಲ್ಲಿಸಿದ್ದ ರಂಗಶಾಮಣ್ಣನ ಕಾರಿನಲ್ಲಿ ಇಬ್ಬರ ಮೊಬೈಲ್ ಮತ್ತು ಕೆರೆಯ ದಂಡೆಯಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿದ್ದವು. ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯನ್ನು ವ್ಯಕ್ತಪಡಿಸಿದ ಪೊಲೀಸರು ಅಗ್ನಿಶಾಮಕ ದಳದ ಸಹಾಯದಿಂದ ಶವ ಪತ್ತೆಗೆ ಮುಂದಾಗಿದ್ದರು.
ಶನಿವಾರ ತಡರಾತ್ರಿಯಾದ ಹಿನ್ನೆಲೆಯಲ್ಲಿ ಪತ್ತೆ ಕಾರ್ಯ ಸ್ಥಗಿತಗೊಳಿಸಿ ಭಾನುವಾರ ಬೆಳಗ್ಗೆಯಿಂದ ಕಾರ್ಯಾಚರಣೆ ಮುಂದುವರೆಸಿದ್ದರು. ಈ ವೇಳೆ ರಂಗಶಾಮಣ್ಣ ಹಾಗೂ ವಿದ್ಯಾರ್ಥಿನಿ ಅನನ್ಯಾ ಅವರ ಮೃತದೇಹಗಳು ಕೆರೆಯಲ್ಲಿ ಪತ್ತೆಯಾಗಿವೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಪ್ರೇಮಿಗಳನ್ನು ಅವರ ಮನೆಯವರೇ ಕೊಲೆ ಮಾಡಿರಬಹುದೇ ಎಂಬ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದು, ಮರಣೋತ್ತರ ಪರೀಕ್ಷೆಯಿಂದ ಮಾಹಿತಿ ಲಭ್ಯವಾಗಲಿದೆ.
Tumkur suicide case, 20 year old college girl flees with 50 year old uncle, bodies of both found at lake. A 19-year-old college student and a married man are reported missing and it is suspected that they may have committed suicide by jumping into the Mavathur lake in Koratagere taluk. Their footwear were found by the edge of the water, giving rise to suspicion.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm