ಬ್ರೇಕಿಂಗ್ ನ್ಯೂಸ್
23-06-24 07:38 pm HK News Desk ಕರ್ನಾಟಕ
ತುಮಕೂರು, ಜೂನ್ 23: ಪದವಿ ಓದುತ್ತಿದ್ದ 20 ವರ್ಷದ ವಿದ್ಯಾರ್ಥಿನಿ ಮತ್ತು 40 ವರ್ಷದ ವಿವಾಹಿತ ಪುರುಷ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಭಾನುವಾರ ಬೆಳಗ್ಗೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಮ್ಮ ಪ್ರೀತಿಗೆ ಮನೆಯವರು ಒಪ್ಪಿಗೆ ನೀಡಿಲ್ಲವೆಂದು ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇವರಿಬ್ಬರ ಶವಗಳು ಪತ್ತೆಯಾಗಿವೆ. ಅನನ್ಯ (19) ಹಾಗೂ ರಂಗಶಾಮಣ್ಣ (40) ಮೃತರೆಂದು ತಿಳಿದುಬಂದಿದೆ. ಅನನ್ಯಾ ಕೊರಟಗೆರೆ ತಾಲೂಕಿನ ಲಕ್ಕಯ್ಯನಪಾಳ್ಯ ಗ್ರಾಮದವಳಾಗಿದ್ದು, ತುಮಕೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಳು. ಪಕ್ಕದ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ ವಿವಾಹಿತ ವ್ಯಕ್ತಿಯಾಗಿದ್ದು, ಈತನಿಗೆ ಮಡದಿ ಮತ್ತು ಮಕ್ಕಳಿದ್ದಾರೆ. ಆದರೆ, ಮಗಳ ವಯಸ್ಸಿನ ಯುವತಿಯನ್ನು ಪ್ರೀತಿಸಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


ಅಕ್ಕಪಕ್ಕದ ಗ್ರಾಮಸ್ಥರಾದ ಇಬ್ಬರೂ ನಾಪತ್ತೆಯಾಗಿ ಮೂರು ದಿನಗಳಾದರೂ ಪತ್ತೆ ಆಗಿರಲಿಲ್ಲ. ಮೊಬೈಲ್ ಟ್ರೇಸ್ ಮಾಡಿದಾಗ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ ಟ್ರೇಸ್ ಆಗಿತ್ತು. ಕೆರೆಯ ಬಳಿ ನಿಲ್ಲಿಸಿದ್ದ ರಂಗಶಾಮಣ್ಣನ ಕಾರಿನಲ್ಲಿ ಇಬ್ಬರ ಮೊಬೈಲ್ ಮತ್ತು ಕೆರೆಯ ದಂಡೆಯಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿದ್ದವು. ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯನ್ನು ವ್ಯಕ್ತಪಡಿಸಿದ ಪೊಲೀಸರು ಅಗ್ನಿಶಾಮಕ ದಳದ ಸಹಾಯದಿಂದ ಶವ ಪತ್ತೆಗೆ ಮುಂದಾಗಿದ್ದರು.
ಶನಿವಾರ ತಡರಾತ್ರಿಯಾದ ಹಿನ್ನೆಲೆಯಲ್ಲಿ ಪತ್ತೆ ಕಾರ್ಯ ಸ್ಥಗಿತಗೊಳಿಸಿ ಭಾನುವಾರ ಬೆಳಗ್ಗೆಯಿಂದ ಕಾರ್ಯಾಚರಣೆ ಮುಂದುವರೆಸಿದ್ದರು. ಈ ವೇಳೆ ರಂಗಶಾಮಣ್ಣ ಹಾಗೂ ವಿದ್ಯಾರ್ಥಿನಿ ಅನನ್ಯಾ ಅವರ ಮೃತದೇಹಗಳು ಕೆರೆಯಲ್ಲಿ ಪತ್ತೆಯಾಗಿವೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಪ್ರೇಮಿಗಳನ್ನು ಅವರ ಮನೆಯವರೇ ಕೊಲೆ ಮಾಡಿರಬಹುದೇ ಎಂಬ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದು, ಮರಣೋತ್ತರ ಪರೀಕ್ಷೆಯಿಂದ ಮಾಹಿತಿ ಲಭ್ಯವಾಗಲಿದೆ.
Tumkur suicide case, 20 year old college girl flees with 50 year old uncle, bodies of both found at lake. A 19-year-old college student and a married man are reported missing and it is suspected that they may have committed suicide by jumping into the Mavathur lake in Koratagere taluk. Their footwear were found by the edge of the water, giving rise to suspicion.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm