ಬ್ರೇಕಿಂಗ್ ನ್ಯೂಸ್
25-06-24 01:08 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 25: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಮಹತ್ವದ ನಿರ್ಧಾರ ಪ್ರಕಟಿಸಿದೆ. ಬೆಂಗಳೂರಿನ ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.
ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂ. ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ಜೂನ್ 26ರಿಂದಲೇ ಈ ದರ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಭೀಮಾನಾಯ್ಕ್ ತಿಳಿಸಿದ್ದಾರೆ.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಇದೇ ಟೋನ್ಡ್ ಲೀಟರ್ ಹಾಲಿನ ಬೆಲೆ 44 ರೂ. ಆಗಲಿದೆ. ಎಲ್ಲ ಪ್ಯಾಕೆಟ್ ಗಳಲ್ಲೂ 50 ಎಂಎಲ್ ಹೆಚ್ಚುವರಿ ಹಾಲು ಸಿಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ ಎಂದು ತಿಳಿಸಿದ ಭೀಮಾ ನಾಯ್ಕ್, ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ., ಮಹಾರಾಷ್ಟ್ರದಲ್ಲಿ 56 ರೂ., ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ದರ ಏರಿಕೆಯನ್ನು ಸಮರ್ಥಿಸಿದರು. ಇತ್ತೀಚಿಗಷ್ಟೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ್ದ ರಾಜ್ಯ ಸರ್ಕಾರ ಇದೀಗ, ಹಾಲಿನ ದರ ಏರಿಸಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಯಾವುದಕ್ಕೆ ಎಷ್ಟು ಏರಿಕೆ ನೋಡಿ..
ಟೋನ್ಡ್ ಹಾಲು
550 ಎಂಎಲ್ – 24 ರೂ.
1050 ಎಂಎಲ್ – 44 ರೂ.
ಹೋಮೋಜಿನೈಸ್ಡ್ ಟೋನ್ಡ್ ಹಾಲು
550 ಎಂಎಲ್ – 24 ರೂ.
1050 ಎಂಎಲ್ – 45 ರೂ.
ಹೋಮೋಜಿನೈಸ್ಡ್ ಹಸುವಿನ ಹಾಲು
550 ಎಂಎಲ್ – 26 ರೂ.
1050 ಎಂಎಲ್ – 48 ರೂ.
ಸ್ಪೆಷಲ್ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಸಮೃದ್ಧಿ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 53 ರೂ.
ಹೋಮೋಜಿನೈಸ್ಡ್ ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 51 ರೂ.
ಸತೃಪ್ತಿ ಹಾಲು
550 ಎಂಎಲ್ – 30 ರೂ.
1050 ಎಂಎಲ್ – 57 ರೂ.
ಶುಭಂ ಗೋಲ್ಡ್ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 51 ರೂ.
ಡಬಲ್ ಟೋನ್ಡ್ ಹಾಲು
550 ಎಂಎಲ್ – 23 ರೂ.
1050 ಎಂಎಲ್ – 43 ರೂ.
Close on the heels of the Karnataka government increasing the prices of petrol and diesel, the Karnataka Milk Federation (KMF) has decided to hike the price of milk by ₹2 a litre. The announcement came from KMF Chairman Bhima Naik at a press conference convened in Bengaluru on Tuesday, June 25.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm