ಬ್ರೇಕಿಂಗ್ ನ್ಯೂಸ್
25-06-24 01:08 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 25: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಮಹತ್ವದ ನಿರ್ಧಾರ ಪ್ರಕಟಿಸಿದೆ. ಬೆಂಗಳೂರಿನ ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.
ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂ. ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ಜೂನ್ 26ರಿಂದಲೇ ಈ ದರ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಭೀಮಾನಾಯ್ಕ್ ತಿಳಿಸಿದ್ದಾರೆ.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಇದೇ ಟೋನ್ಡ್ ಲೀಟರ್ ಹಾಲಿನ ಬೆಲೆ 44 ರೂ. ಆಗಲಿದೆ. ಎಲ್ಲ ಪ್ಯಾಕೆಟ್ ಗಳಲ್ಲೂ 50 ಎಂಎಲ್ ಹೆಚ್ಚುವರಿ ಹಾಲು ಸಿಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ ಎಂದು ತಿಳಿಸಿದ ಭೀಮಾ ನಾಯ್ಕ್, ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ., ಮಹಾರಾಷ್ಟ್ರದಲ್ಲಿ 56 ರೂ., ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ದರ ಏರಿಕೆಯನ್ನು ಸಮರ್ಥಿಸಿದರು. ಇತ್ತೀಚಿಗಷ್ಟೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ್ದ ರಾಜ್ಯ ಸರ್ಕಾರ ಇದೀಗ, ಹಾಲಿನ ದರ ಏರಿಸಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಯಾವುದಕ್ಕೆ ಎಷ್ಟು ಏರಿಕೆ ನೋಡಿ..
ಟೋನ್ಡ್ ಹಾಲು
550 ಎಂಎಲ್ – 24 ರೂ.
1050 ಎಂಎಲ್ – 44 ರೂ.
ಹೋಮೋಜಿನೈಸ್ಡ್ ಟೋನ್ಡ್ ಹಾಲು
550 ಎಂಎಲ್ – 24 ರೂ.
1050 ಎಂಎಲ್ – 45 ರೂ.
ಹೋಮೋಜಿನೈಸ್ಡ್ ಹಸುವಿನ ಹಾಲು
550 ಎಂಎಲ್ – 26 ರೂ.
1050 ಎಂಎಲ್ – 48 ರೂ.
ಸ್ಪೆಷಲ್ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಸಮೃದ್ಧಿ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 53 ರೂ.
ಹೋಮೋಜಿನೈಸ್ಡ್ ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 51 ರೂ.
ಸತೃಪ್ತಿ ಹಾಲು
550 ಎಂಎಲ್ – 30 ರೂ.
1050 ಎಂಎಲ್ – 57 ರೂ.
ಶುಭಂ ಗೋಲ್ಡ್ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 51 ರೂ.
ಡಬಲ್ ಟೋನ್ಡ್ ಹಾಲು
550 ಎಂಎಲ್ – 23 ರೂ.
1050 ಎಂಎಲ್ – 43 ರೂ.
Close on the heels of the Karnataka government increasing the prices of petrol and diesel, the Karnataka Milk Federation (KMF) has decided to hike the price of milk by ₹2 a litre. The announcement came from KMF Chairman Bhima Naik at a press conference convened in Bengaluru on Tuesday, June 25.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm