ಬ್ರೇಕಿಂಗ್ ನ್ಯೂಸ್
26-06-24 07:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 26: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿಗಳು 700ಕ್ಕೂ ಹೆಚ್ಚು ಖಾತೆಗಳಿಗೆ 94 ಕೋಟಿ ಹಣವನ್ನು ವರ್ಗಾವಣೆ ಮಾಡಿ, ಡ್ರಾ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ. ಹೈದರಾಬಾದ್ ನಲ್ಲಿ ಬಂಧಿತರಾಗಿರುವ ಸತ್ಯನಾರಾಯಣ ಶರ್ಮಾ ಮತ್ತು ಸಾಯಿತೇಜ್ ಅವರನ್ನು ತನಿಖೆ ನಡೆಸಿದಾಗ, ಹಣವನ್ನು ಬಳ್ಳಾರಿ, ಬೆಂಗಳೂರು ಭಾಗದ ನೂರಾರು ಮಂದಿಯ ಖಾತೆಗಳಿಗೆ ರವಾನಿಸಿರುವ ಮಾಹಿತಿ ನೀಡಿದ್ದಾರೆ.
ಹೈದರಾಬಾದಿನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋಪರೇಟಿವ್ ಎನ್ನುವ ಸಹಕಾರಿ ಸಂಸ್ಥೆಗೆ ವಾಲ್ಮೀಕಿ ನಿಗಮದ 94.73 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ಬಗ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಹಕಾರಿ ಬ್ಯಾಂಕಿನಲ್ಲಿ ನಕಲಿ ಖಾತೆಗಳನ್ನು ಸಹಕರಿಸಿದ್ದ ಸತ್ಯನಾರಾಯಣ ಶರ್ಮಾ ಹಾಗೂ ದಾವಣಗೆರೆಯ ಚನ್ನಗಿರಿ ಮೂಲದ ಸಾಯಿತೇಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಿದ್ದು, ಅವರಿಂದ 14 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. 94 ಕೋಟಿ ಪೈಕಿ 5 ಕೋಟಿಯನ್ನು ನಿಗಮದ ಬ್ಯಾಂಕ್ ಖಾತೆಗೆ ವಾಪಸ್ ಮಾಡಲಾಗಿತ್ತು. ಉಳಿದ 89 ಕೋಟಿ ಮೊತ್ತವನ್ನು 700ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿಯಿದೆ. ಆ ಖಾತೆಗಳಿಗೆ ಹಣ ರವಾನಿಸಿದ್ದು ಯಾರು, ಹಣವನ್ನು ಡ್ರಾ ಮಾಡಿ ಯಾರಿಗೆ ತಲುಪಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಮಿಕರು ಸೇರಿದಂತೆ ಹಲವಾರು ಮಂದಿಯ ಖಾತೆಗಳಿಗೆ 5 ಲಕ್ಷದಿಂದ 2 ಕೋಟಿ ವರೆಗೂ ಹಣ ವರ್ಗಾವಣೆ ಆಗಿದೆ. ಬ್ಯಾಂಕ್ ಖಾತೆ ತೆರೆಯುವುದು, ಡ್ರಾ ಮಾಡುವುದು, ಹಣವನ್ನು ಪೂರೈಕೆ ಮಾಡುವುದರ ಹಿಂದೆ ಶರ್ಮಾ ಮತ್ತು ಸಾಯಿತೇಜ್ ಕೈವಾಡ ಹೊಂದಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.
The SIT officers investigating the Valmiki Development Corporation scam found that the accused had transferred and withdrawn Rs 94 crore to more than 700 accounts.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm