ಬ್ರೇಕಿಂಗ್ ನ್ಯೂಸ್
26-06-24 07:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 26: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿಗಳು 700ಕ್ಕೂ ಹೆಚ್ಚು ಖಾತೆಗಳಿಗೆ 94 ಕೋಟಿ ಹಣವನ್ನು ವರ್ಗಾವಣೆ ಮಾಡಿ, ಡ್ರಾ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ. ಹೈದರಾಬಾದ್ ನಲ್ಲಿ ಬಂಧಿತರಾಗಿರುವ ಸತ್ಯನಾರಾಯಣ ಶರ್ಮಾ ಮತ್ತು ಸಾಯಿತೇಜ್ ಅವರನ್ನು ತನಿಖೆ ನಡೆಸಿದಾಗ, ಹಣವನ್ನು ಬಳ್ಳಾರಿ, ಬೆಂಗಳೂರು ಭಾಗದ ನೂರಾರು ಮಂದಿಯ ಖಾತೆಗಳಿಗೆ ರವಾನಿಸಿರುವ ಮಾಹಿತಿ ನೀಡಿದ್ದಾರೆ.
ಹೈದರಾಬಾದಿನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋಪರೇಟಿವ್ ಎನ್ನುವ ಸಹಕಾರಿ ಸಂಸ್ಥೆಗೆ ವಾಲ್ಮೀಕಿ ನಿಗಮದ 94.73 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ಬಗ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಹಕಾರಿ ಬ್ಯಾಂಕಿನಲ್ಲಿ ನಕಲಿ ಖಾತೆಗಳನ್ನು ಸಹಕರಿಸಿದ್ದ ಸತ್ಯನಾರಾಯಣ ಶರ್ಮಾ ಹಾಗೂ ದಾವಣಗೆರೆಯ ಚನ್ನಗಿರಿ ಮೂಲದ ಸಾಯಿತೇಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಿದ್ದು, ಅವರಿಂದ 14 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. 94 ಕೋಟಿ ಪೈಕಿ 5 ಕೋಟಿಯನ್ನು ನಿಗಮದ ಬ್ಯಾಂಕ್ ಖಾತೆಗೆ ವಾಪಸ್ ಮಾಡಲಾಗಿತ್ತು. ಉಳಿದ 89 ಕೋಟಿ ಮೊತ್ತವನ್ನು 700ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿಯಿದೆ. ಆ ಖಾತೆಗಳಿಗೆ ಹಣ ರವಾನಿಸಿದ್ದು ಯಾರು, ಹಣವನ್ನು ಡ್ರಾ ಮಾಡಿ ಯಾರಿಗೆ ತಲುಪಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಮಿಕರು ಸೇರಿದಂತೆ ಹಲವಾರು ಮಂದಿಯ ಖಾತೆಗಳಿಗೆ 5 ಲಕ್ಷದಿಂದ 2 ಕೋಟಿ ವರೆಗೂ ಹಣ ವರ್ಗಾವಣೆ ಆಗಿದೆ. ಬ್ಯಾಂಕ್ ಖಾತೆ ತೆರೆಯುವುದು, ಡ್ರಾ ಮಾಡುವುದು, ಹಣವನ್ನು ಪೂರೈಕೆ ಮಾಡುವುದರ ಹಿಂದೆ ಶರ್ಮಾ ಮತ್ತು ಸಾಯಿತೇಜ್ ಕೈವಾಡ ಹೊಂದಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.
The SIT officers investigating the Valmiki Development Corporation scam found that the accused had transferred and withdrawn Rs 94 crore to more than 700 accounts.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm