ಬ್ರೇಕಿಂಗ್ ನ್ಯೂಸ್
27-06-24 02:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಸಿಎಂ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಆಗಾಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದರೆ ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆಯೊಂದು ನಡೆದಿದೆ.
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು.
ಇನ್ನು ವೇದಿಕೆಯಲ್ಲಿ ಮಾತನಾಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.
ಅದಾಗಲೇ ನಿಮಗೆ ಸಿಎಂ ಆಗಿ ಕಾರ್ಯನಿರ್ವಹಿಸಿದ್ದೀರಿ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ ಎಂದು ವೇದಿಕೆ ಮೇಲೆಯೇ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿರುವುದು ಸಿದ್ದರಾಮಯ್ಯ ಅವರ ಇರಿಸು ಮುರುಸಿಗೂ ಕಾರಣವಾಗಿತ್ತು.
ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು.
ಬೆಂಗಳೂರನ್ನ ವಿಭಾಗ ಮಾಡುವುದು ಬೇಡ. ಉತ್ತರ ಕರ್ನಾಟಕ ಬೇರೆ ದಕ್ಷಿಣ ಕರ್ನಾಟಕ ಬೇರೆ ಅಂತ ಡಿವೈಡ್ ಮಾಡಿದರೆ ಅಭಿವೃದ್ಧಿ ಆಗಲ್ಲ ಹಾಗೆಯೆ ಬೆಂಗಳೂರು ವಿಭಾಗ ಮಾಡುವುದು ಬೇಡ ಎಮದು ಇದೇ ವೇಳೆ ಸ್ವಾಮೀಜಿ ಮನವಿ ಮಾಡಿಕೊಂಡರು.
Just weeks after the Lok Sabha elections, talks for change in the leadership in Karnataka have begun. A Vokkaliga seer has requested Siddaramaiah to step aside and let DK Shivakumar, the deputy chief minister and state party president, be the next chief minister of Karnataka.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm