ಬ್ರೇಕಿಂಗ್ ನ್ಯೂಸ್
27-06-24 02:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಸಿಎಂ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಆಗಾಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದರೆ ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆಯೊಂದು ನಡೆದಿದೆ.
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು.
ಇನ್ನು ವೇದಿಕೆಯಲ್ಲಿ ಮಾತನಾಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.
ಅದಾಗಲೇ ನಿಮಗೆ ಸಿಎಂ ಆಗಿ ಕಾರ್ಯನಿರ್ವಹಿಸಿದ್ದೀರಿ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ ಎಂದು ವೇದಿಕೆ ಮೇಲೆಯೇ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿರುವುದು ಸಿದ್ದರಾಮಯ್ಯ ಅವರ ಇರಿಸು ಮುರುಸಿಗೂ ಕಾರಣವಾಗಿತ್ತು.
ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು.
ಬೆಂಗಳೂರನ್ನ ವಿಭಾಗ ಮಾಡುವುದು ಬೇಡ. ಉತ್ತರ ಕರ್ನಾಟಕ ಬೇರೆ ದಕ್ಷಿಣ ಕರ್ನಾಟಕ ಬೇರೆ ಅಂತ ಡಿವೈಡ್ ಮಾಡಿದರೆ ಅಭಿವೃದ್ಧಿ ಆಗಲ್ಲ ಹಾಗೆಯೆ ಬೆಂಗಳೂರು ವಿಭಾಗ ಮಾಡುವುದು ಬೇಡ ಎಮದು ಇದೇ ವೇಳೆ ಸ್ವಾಮೀಜಿ ಮನವಿ ಮಾಡಿಕೊಂಡರು.
Just weeks after the Lok Sabha elections, talks for change in the leadership in Karnataka have begun. A Vokkaliga seer has requested Siddaramaiah to step aside and let DK Shivakumar, the deputy chief minister and state party president, be the next chief minister of Karnataka.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm